ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ

Published : Dec 21, 2016, 01:32 PM ISTUpdated : Apr 11, 2018, 12:55 PM IST
ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ

ಸಾರಾಂಶ

ಉಸಿರಾಟದ ತೊಂದರೆಯಿಂದ ಡಿಸೆಂಬರ್ 15ರ ರಾತ್ರಿ ಕರುಣಾನಿಧಿ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ಚೆನ್ನೈ(ಡಿ.21): ಡಿಎಂಕೆ ವರಿಷ್ಠ ಕರುಣಾನಿಧಿ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದ್ದು, ಕಾವೇರಿ ಆಸ್ಪತ್ರೆಯಿಂದ ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ. ಆಸ್ಪತ್ರೆಯಲ್ಲಿ ಕರುಣಾನಿಧಿ ಚೇತರಿಸಿಕೊಂಡಿರುವ ಬಗ್ಗೆ ಆಸ್ಪತ್ರೆಯಿಂದ ಫೋಟೋಗಳೂ ರಿಲೀಸ್ ಆಗಿವೆ. ಕರುಣಾನಿಧಿ ಚೇರ್ ಮೇಲೆ ಕುಳಿತು ಟಿವಿ ನೋಡುತ್ತಿರುವ ದೃಶ್ಯಗಳು ಅವರ ಆರೋಗ್ಯ ಸುಧಾರಿಸಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ.

`ಡಿಎಂಕೆ ಅಧ್ಯಕ್ಷ ಡಾ.ಎಂ. ಕರುಣಾನಿಧಿ ಅವರು ಕಾವೇರಿ ಆಸ್ಪತ್ರೆಯಲ್ಲಿ ಸಂಪೂರ್ಣ ಚೇತರಿಸಿಕೊಂಡಿದ್ದು, ಆಂಟಿಬಯೋಟಿಕ್ಸ್ ಕೋರ್ಸ್ ಮುಗಿದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಆಸ್ಪತ್ರೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಉಸಿರಾಟದ ತೊಂದರೆಯಿಂದ ಡಿಸೆಂಬರ್ 15ರ ರಾತ್ರಿ ಕರುಣಾನಿಧಿ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುವ ನಿಧಿ ಯೋಜನೆ: 3.62 ಲಕ್ಷ ನಿರುದ್ಯೋಗಿಗಳ ನೋಂದಣಿ, 2,326 ಮಂದಿಗೆ ಸಿಕ್ಕಿದೆ ಕೆಲಸ!
ಇನ್ನೆರಡು ವರ್ಷದಲ್ಲಿ 175 ಕಿ.ಮೀ ಮೆಟ್ರೋ ಸೇವೆ ಜನರಿಗೆ ಲಭ್ಯ : ಡಿ.ಕೆ.ಶಿವಕುಮಾರ್