ಕಾವೇರಿ ನದಿ ಪುಷ್ಕರ ಸ್ನಾನ ಆರಂಭ; ಸಾವಿರಾರು ಭಕ್ತರಿಂದ ವಿಶೇಷ ಪೂಜೆ

Published : Sep 12, 2017, 11:06 AM ISTUpdated : Apr 11, 2018, 12:47 PM IST
ಕಾವೇರಿ ನದಿ ಪುಷ್ಕರ ಸ್ನಾನ ಆರಂಭ; ಸಾವಿರಾರು ಭಕ್ತರಿಂದ ವಿಶೇಷ ಪೂಜೆ

ಸಾರಾಂಶ

12 ವರ್ಷಗಳಿಗೊಮ್ಮೆ ನಡೆಯುವ ಮಹಾ ಪುಷ್ಕರಣೆಗೆ ಈ ಬಾರಿ ಪವಿತ್ರ ನದಿ ಕಾವೇರಿ ಸಾಕ್ಷಿಯಾಗಲಿದ್ದಾಳೆ.

ಮಂಡ್ಯ(ಸೆ.12): ಐತಿಹಾಸಿಕ ನಗರ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಮಹಾ ಪುಷ್ಕರ ಪವಿತ್ರ ಸ್ನಾನ ಕಾರ್ಯ ಆರಂಭವಾಗಿದೆ. 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಪುಷ್ಕರಣೆಗೆ ಈ ಬಾರಿ ಪವಿತ್ರ ನದಿ ಕಾವೇರಿ ಸಾಕ್ಷಿಯಾಗಲಿದ್ದಾಳೆ.

ದಕ್ಷಿಣ ಗಂಗೆ, ತಾಯಿ ಕಾವೇರಿಯ ಸನ್ನಿಧಿಯಲ್ಲಿ ಭಕ್ತರು ಮಿಂದೆದ್ದು, ವ್ರತ, ತಪ, ಜಪ, ಯೋಗ, ತರ್ಪಣಾದಿಗಳನ್ನು ನೀಡಲಿದ್ದಾರೆ. ಕಳೆದ ವರ್ಷ ಕೃಷ್ಣಾ ನದಿಯಲ್ಲಿ ಮಹಾಪುಷ್ಕರಣೆ ನಡೆದಿತ್ತು. ಗುರು ಗ್ರಹವು ಸೆಪ್ಟೆಂಬರ್ 12ರಂದು ಬೆಳಗ್ಗೆ ತುಲಾ ರಾಶಿಗೆ ಪ್ರವೇಶವಾಗುತ್ತಿದ್ದಾನೆ. ಹೀಗಾಗಿ, ಕಾವೇರಿ ನದಿಯಲ್ಲಿ ಮಹಾ ಪುಷ್ಕರಣೆಗೊಳ್ಳಲಿದೆ.

ಕಾವೇರಿ ನದಿ ದಡದ ಸುಮಾರು 10 ಕಡೆಗಳಲ್ಲಿ ಭಕ್ತರ ಸ್ನಾನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಾಯಿಸುಕೊಳ್ಳಲು ತಾತ್ಕಾಲಿಕ ಡೇರೆಗಳು, ಸಂಚಾರಿ ಬೂತ್'ಗಳನ್ನು ನಿರ್ಮಿಸಲಾಗಿದೆ. ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಲಾಗಿದ್ದು, ಪಟ್ಟಣ ಪಂಚಾಯಿತಿ ಈ ಬಗ್ಗೆ ನಿಗಾ ವಹಿಸಿದೆ. ಮೊಬೈಲ್ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಆರಭಿಸಲಾಗಿದೆ. ಮೇಷಾದಿ ದ್ವಾದಶ ರಾಶಿಗಳಿಗೆ ಗುರು ಪ್ರವೇಶಿಸುವ ಕಾಲ ಇದಾಗಿದ್ದು, ಇಂದು ತುಲಾ ರಾಶಿಯನ್ನು ಪ್ರವೇಶ ಮಾಡುವ ಪುಣ್ಯಕಾಲ ಸಹ ಹೌದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸರ ಮುಂದೆ ಡೀಲ್ ಮಾಡಲು ಹೋಗಿ ತಗಲಾಕೊಂಡ ಗ್ಯಾಂಗ್: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಐವರ ಬಂಧನ
ಟೆಕ್ಕಿ ಕೆಲಸ ಹೋದ್ರೇನು 'ರೋಡ್ ಸೈಡಲ್ಲಿ ಟಿಕ್ಕಿಪೂರಿ' ಮಾರುವ ಸಾಫ್ಟ್‌ವೇರ್ ಇಂಜಿನಿಯರ್; ನಟ ಜಗ್ಗೇಶ್ ಮೆಚ್ಚುಗೆ!