ಮಾಜಿ ಸಿಎಂ ಸಿದ್ದರಾಮಯ್ಯನನ್ನು ಭೇಟಿ ಮಾಡಿದ ಕವಿತಾ ಲಂಕೇಶ್

Jun 16, 2018, 4:23 PM IST

ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಸಹೋದರಿ ಕವಿತಾ ಲಂಕೇಶ್ ಹಾಗೂ ತಾಯಿ ಇಂದಿರಾ ಲಂಕೇಶ್ ಮಾಜಿ ಸಿಎಂ ಸಿದ್ದರಾಮಯ್ಯನನ್ನು ಭೇಟಿ ಮಾಡಿ ಧನ್ಯವಾದಗಳನ್ನು ಅರ್ಪಿಸಿದರು. ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಹೀಗಾಗಿ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಧನ್ಯವಾದಗಳನ್ನು ತಿಳಿಸಲು ಬಂದಿದ್ದೇವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.