
ಬೆಂಗಳೂರು[ಜೂ.14]: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯದ ನಾಯಕರು ತಮ್ಮ ಪರ ಒಲವಿರುವ ಮತ್ತಷ್ಟು ನಾಯಕರ ಹೆಸರನ್ನು ಹೈಕಮಾಂಡ್'ನಲ್ಲಿ ತೇಲಿಬಿಟ್ಟಿದ್ದಾರೆ.
ಹೈಕಮಾಂಡ್ ದಿನೇಶ್ ಗುಂಡೂರಾವ್ ಅವರ ಬಗ್ಗೆ ಹೆಚ್ಚು ಒಲವು ವ್ಯಕ್ತವಾಗಿದ್ದರೂ ಹಾಲಿ ಅಧ್ಯಕ್ಷ ಜಿ.ಪರಮೇಶ್ವರ್ ಬಿ.ಕೆ.ಹರಿಪ್ರಸಾದ್ ಹಾಗೂ ಕೆ.ಹೆಚ್.ಮುನಿಯಪ್ಪ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರು ದಿನೇಶ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ದಿನೇಶ್ ಅವರನ್ನೇ ಅಂತಿಮಗೊಳಿಸಲು ಆಸಕ್ತಿವಹಿಸಿದ್ದರು.
ಕಳೆದ ಎರಡು ಮೂರು ದಿನಗಳಿಂದ ಹಾಲಿ ಕೆಪಿಸಿಸಿ ಅಧ್ಯಕ್ಷರು ಹರಿಪ್ರಸಾದ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಬಗ್ಗೆ ಹೆಚ್ಚು ಒಲವು ತೋರಿಸುತ್ತಿದ್ದು ಇವರಿಬ್ಬರಲ್ಲಿ ಒಬ್ಬರನ್ನು ನೇಮಿಸಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿ.ಕೆ. ಹರಿಪ್ರಸಾದ್ ಹಿಂದುಳಿದ ವರ್ಗಕ್ಕೆ ಸೇರಿದರೆ, ಕೆ.ಹೆಚ್. ಮುನಿಯಪ್ಪ ದಲಿತ ಎಡಗೈ ಸಮುದಾಯದವರಾಗಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಂಪುಟದಲ್ಲಿ ಇವೆರಡು ಸಮುದಾಯಕ್ಕೆ ಹೆಚ್ಚು ಪ್ರಾತಿನಿದ್ಯ ನೀಡಲಾಗಿಲ್ಲ. ಈ ಕಾರಣದಿಂದ ಇವರಲ್ಲಿ ಯಾರಾದರೊಬ್ಬರನ್ನು ನೇಮಿಸಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತೀ ಹೆಚ್ಚು ಸ್ಥಾನ ಗೆಲ್ಲಬಹುದೆಂಬ ಮಾಹಿತಿಯನ್ನು ಹೈಕಮಾಂಡ್'ಗೆ ರವಾನಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.