
ಹೈದರಾಬಾದ್[ಡಿ.21]: ಒಂದೆಡೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಿ 2019ರ ಲೋಕಸಭಾ ಚುನಾವಣೆಗೆ ಮಹಾಮೈತ್ರಿಕೂಟ ರಚನೆಗೆ ಯತ್ನಿಸುತ್ತಿರುವಾಗಲೇ, ಅವರ ಕಡುವೈರಿ ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರು ಬಿಜೆಪಿ ಮತ್ತು ಕಾಂಗ್ರೆಸ್ಸೇತರ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಸಂಯುಕ್ತ ರಂಗ ರಚಿಸುವಲ್ಲಿ ನಿರತರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಹಾಮೈತ್ರಿಕೂಟದ ಸಭೆಯಿಂದ ಅಂತರ ಕಾಯ್ದುಕೊಳ್ಳುತ್ತಿರುವ ಹಾಗೂ ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳ ಮಾತುಕತೆ ನಡೆಸಿದೆ ಎನ್ನಲಾಗಿದೆ.
‘ಆಯಾ ರಾಜ್ಯಗಳಲ್ಲಿ ಪ್ರಬಲವಾಗಿರುವ ಎಲ್ಲ ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕು ಎಂಬುದು ನಮ್ಮ ಇರಾದೆ. ಇದರಿಂದ ನಮ್ಮ ಬಲ ಹೆಚ್ಚಲಿದ್ದು, ಬಿಜೆಪಿಯಾಗಲಿ ಅಥವಾ ಕಾಂಗ್ರೆಸ್ ಜತೆಗಾಗಲಿ ಚೌಕಾಶಿ ಮಾಡಲು ಅನುಕೂಲವಾಗುತ್ತದೆ’ ಎಂದು ಲೋಕಸಭೆಯ್ಲಿನ ಟಿಆರ್ಎಸ್ ಉಪನಾಯಕ ಬಿ. ವಿನೋದ್ಕುಮಾರ್ ಹೇಳಿದರು.
ಹೀಗೆ ಮಾಡದೇ ಹೋದರೆ ಕಾಂಗ್ರೆಸ್ ಅಥವಾ ಬಿಜೆಪಿಗಳು ಪ್ರತ್ಯೇಕವಾಗಿ ಪ್ರಾದೇಶಿಕ ಪಕ್ಷಗಳ ಜತೆ ವ್ಯವಹಾರ ಕುದುರಿಸಿ ತಮ್ಮ ಅಣತಿಯಂತೆ ನಡೆಸಿಕೊಳ್ಳುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಈಗಾಗಲೇ ಈ ತಂತ್ರಗಾರಿಕೆ ಸಂಬಂಧ ಎಸ್ಪಿ, ಬಿಎಸ್ಪಿ ಹಾಗೂ ಟಿಎಂಸಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ