ಕೆಸಿಆರ್ ಇಂಡಿಯಾ ಟೂರ್ ಶುರು: ಮೈತ್ರಿಗಾಗಿ ಫಸ್ಟ್ ಸ್ಟಾಪ್ ಒಡಿಶಾ!

Published : Dec 24, 2018, 12:52 PM IST
ಕೆಸಿಆರ್ ಇಂಡಿಯಾ ಟೂರ್ ಶುರು: ಮೈತ್ರಿಗಾಗಿ ಫಸ್ಟ್ ಸ್ಟಾಪ್ ಒಡಿಶಾ!

ಸಾರಾಂಶ

ಬಿಜೆಪಿ-ಕಾಂಗ್ರೆಸ್ ಹೊರತಾದ ಮಹಾಮೈತ್ರಿಗೆ ಕೆಸಿಆರ್ ಮುಂದು| ದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳೊಂದಿಗೆ ಮಾತುಕತೆಗೆ ಸಿದ್ಧ| ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರೊಂದಿಗೆ ಕೆಸಿಆರ್ ಮಾತುಕತೆ|ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೆ ಭೇಟಿ ಸಾಧ್ಯತೆ| ಕೇಂದ್ರದಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರ ರಚನೆಗೆ ಕೆಸಿಆರ್ ಭರ್ಜರಿ ಪ್ಲ್ಯಾನ್

ಭುವನೇಶ್ವರ್(ಡಿ.24): ತೆಲಂಗಾಣದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಟಿಆರ್ ಎಸ್ ಮುಖ್ಯಸ್ಥ ಕೆ.ಸಿ. ಚಂದ್ರಶೇಖರ್ ರಾವ್, ತಾವು ರಾಷ್ಟ್ರ ರಾಜಕಾರಣದತ್ತ ದೃಷ್ಟಿ ನೆಟ್ಟಿರುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಅದರಂತೆ ಇದೀಗ ಕೆಸಿಆರ್, ಬಿಜೆಪಿ-ಕಾಂಗ್ರೆಸ್ ಹೊರತಾದ ಮಹಾಮೈತ್ರಿಗೆ ಮುಂದಾಗಿದ್ದಾರೆ. ದೇಶಾದ್ಯಂತ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ದೆಹಲಿ ಗದ್ದುಗೆ ವಶಕ್ಕೆ ಪಡೆಯುವ ಯೋಜನೆ ಕೆಸಿಆರ್ ಅವರದ್ದಾಗಿದೆ.

ದೆಹಲಿಯಲ್ಲಿ ಬಿಜೆಪಿ-ಕಾಂಗ್ರೆಸ್ ಹೊರತಾದ ಸರ್ಕಾರದ ಕನಸು ಕಾಣುತ್ತಿರುವ ಕೆಸಿಆರ್, 2019ರ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದಾರೆ.

ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಇಂದು ಕೆಸಿಆರ್, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇಲ್ಲಿಂದ ಪ.ಬಂಗಾಳಕ್ಕೆ ಹೊರಡಲಿರುವ ಕೆಸಿಆರ್, ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಎಸ್‌ಪಿ ಮತ್ತು ಬಿಎಸ್ ಪಿ ಸೇರಿದಂತೆ ಇತರ ಪ್ರಮುಖ ಪ್ರಾದೇಶಿಕ ಪಕ್ಷಗಳೊಂದಿಗೆ ಕೆಸಿಆರ್ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್