ಕೇದಾರನಾಥ : 5 ವರ್ಷದ ಹಿಂದಿನ 450 ಮೃತದೇಹ ಪತ್ತೆ

Published : Oct 16, 2018, 11:37 AM IST
ಕೇದಾರನಾಥ :  5 ವರ್ಷದ ಹಿಂದಿನ 450 ಮೃತದೇಹ ಪತ್ತೆ

ಸಾರಾಂಶ

ಉತ್ತರಾಖಂಡ್‌ನ ಕೇದಾರನಾಥ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 5 ವರ್ಷಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಅಸ್ಥಿಪಂಜರಗಳು ಮತ್ತೆ ಪತ್ತೆಯಾಗಿವೆ. 

ಡೆಹ್ರಾಡೂನ್: ಉತ್ತರಾಖಂಡ್‌ನ ಕೇದಾರನಾಥ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 5 ವರ್ಷಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಅಸ್ಥಿಪಂಜರಗಳು ಮತ್ತೆ ಪತ್ತೆಯಾಗಿವೆ. 

ಇಲ್ಲಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗೊಳ್ಳಲಾದ 3 ದಿನಗಳ ಶೋಧ ಕಾರ್ಯಾಚರಣೆಯಲ್ಲಿ ನಾಲ್ಕು ತಲೆಬುರುಡೆಗಳು ಸೇರಿದಂತೆ ಒಟ್ಟು 21 ಅಸ್ಥಿಪಂಜರಗಳು ಪತ್ತೆಯಾಗಿವೆ. 

2013ರಲ್ಲಿ ಸಂಭವಿಸಿದ ಕೇದರನಾಥ ಭೂಕುಸಿತ ಮತ್ತು ಪ್ರವಾಹದಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ್ದರು. 3500 ಮಂದಿ ನಾಪತ್ತೆಯಾಗಿದ್ದು, ಇದರಲ್ಲಿ 450 ಮೃತದೇಹಗಳು ಪತ್ತೆಯಾಗಿವೆ ಎಂದು ರಾಜ್ಯ ಸರ್ಕಾರ ಹೇಳಿತ್ತು. 

ಈ ಹಿನ್ನೆಲೆಯಲ್ಲಿ, ಉಳಿದವರೂ ಸಹ ಅವಶೇಷಗಳಡಿ ಮುಚ್ಚಿ ಹೋಗಿರಬಹುದು. ಈ ಬಗ್ಗೆ ಮತ್ತೊಮ್ಮೆ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ ಹೈಕೋರ್ಟ್ ಆದೇಶ ಪಾಲನೆಗಾಗಿ ರಾಜ್ಯ ಸರ್ಕಾರ, 3 ದಿನಗಳ ಶೋಧ ಕಾರ್ಯಾಚರಣೆ ಕೈಗೊಂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ