
ಬೆಂಗಳೂರು( ಸೆ.20): ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಕರ್ನಾಟಕಕ್ಕೆ ಮತ್ತೆ ಭಾರೀ ಹಿನ್ನೆಡೆಯಾಗಿದೆ. ಈ ಬಗ್ಗೆ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ.
ಮೇಲುಸ್ತುವಾರಿ ಸಮಿತಿ ನಿನ್ನೆ ಒಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಇವತ್ತು 6000 ಕ್ಯೂಸೆಕ್ ನೀರು ಬಿಡಲು ಹೇಳಿದೆ. ಅಲ್ಲದೆ ಕೇಂದ್ರಕ್ಕೆ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿದೆ. ಈ ಬಗ್ಗೆ
ನಾಳೆ ಕ್ಯಾಬಿನೆಟ್ನಲ್ಲಿ ಕಾನೂನು ಹೋರಾಟ ಮಾಡುವ ಕುರಿತು ಚರ್ಚಿಸುತ್ತೇನೆ. ನಾಳೆ ಸಂಜೆ 5 ಗಂಟೆಗೆ ವಿರೋಧ ಪಕ್ಷಗಳ ಜೊತೆ ಸಭೆ ನಡೆಸುತ್ತೇನೆ. ಹಾಗೂ ರಾಜ್ಯದ ಸಂಸದರ ಜೊತೆ ಮಾತುಕತೆ ನಡೆಸುತ್ತೇನೆ. ಸಭೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ರಾಜ್ಯದಲ್ಲಿ ಎಲ್ಲರೂ ಶಾಂತಿ ಕಾಪಾಡಬೇಕಿದೆ. ಆವೇಶಕ್ಕೆ, ಉದ್ವೇಗಕ್ಕೆ ಯಾರು ಒಳಗಾಗಬಾರದು. ಕಾವೇರಿ ಭಾಗದ ಎಲ್ಲ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ನಾಳೆ ಸಚಿವ ಸಂಪುಟದ ಸಭೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.