ಸರ್ಜಿಕಲ್ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು: ಕಾಂಗ್ರೆಸ್

Published : Oct 05, 2016, 06:02 AM ISTUpdated : Apr 11, 2018, 12:57 PM IST
ಸರ್ಜಿಕಲ್ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು: ಕಾಂಗ್ರೆಸ್

ಸಾರಾಂಶ

ನವದೆಹಲಿ (ಅ.05): ಸರ್ಜಿಕಲ್ ದಾಳಿ ನಡೆದಿರುವ ಬಗ್ಗೆ ಪ್ರಶ್ನೆಗಳು ಏಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಪಿ.ಸಿ.ಚಾಕೋ ಆಗ್ರಹಿಸಿದ್ದಾರೆ.

ಸರ್ಜಿಕಲ್ ದಾಳಿ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್’ಗೆ ಆ ಬಗ್ಗೆ ಯಾವುದೇ ಸಂಶಯಗಳಿಲ್ಲ. ಈ ವಿಚಾರದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ, ಎಂದು ಚಾಕೋ ಹೇಳಿದ್ದಾರೆ.

ಸರ್ಜಿಕಲ್ ದಾಳಿಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದು ಸರಿಯಲ್ಲ. ಸರ್ಜಿಕಲ್ ದಾಳಿಯನ್ನು ರಾಜಕೀಯ ಲಾಭ ಪಡೆಯಲು ಬಳಸಿದಾಗ ಗೊಂದಲವುಂಟಾಗುತ್ತದೆ. ಕೇಜ್ರೀವಾಲ್ ಮತ್ತಿತರು ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿ ಅವರ ಗೊಂದಲ ಪರಿಹರಿಸಬೇಕು, ಎಂದು ಚಾಕೋ ಹೇಳಿದ್ದಾರೆ.

ಸರ್ಜಿಕಲ್ ದಾಳಿಗೆ ಕೇಂದ್ರ ಸರ್ಕಾರ ಪುರಾವೆ ಒದಗಿಸಬೇಕೆಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್, ಚಿದಂಬರಂ, ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳೆದ ದಿನಗಳಲ್ಲಿ ಆಗ್ರಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ