
ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಹೊಗಳಿದ್ದ ಕೇರಳದ ಮಾಜಿ ಸಂಸದ ಎ.ಪಿ. ಅಬ್ದುಲ್ಲಾ ಕುಟ್ಟಿಅವರನ್ನು ರಾಜ್ಯ ಕಾಂಗ್ರೆಸ್ ಘಟಕ ಸೋಮವಾರ ಉಚ್ಚಾಟಿಸಿದೆ.
ಗಾಂಧೀಜಿ ಅವರ ಮೌಲ್ಯಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡ ಕಾರಣಕ್ಕೆ ಮೋದಿ ಅವರು ಜನಪ್ರಿಯರಾಗಿದ್ದಾರೆ. ಇದಕ್ಕೆ ಸ್ವಚ್ಛ ಭಾರತ ಹಾಗೂ ಉಜ್ವಲ ಯೋಜನೆಗಳೇ ಉದಾಹರಣೆ ಎಂದು ಕಣ್ಣೂರಿನ ಮಾಜಿ ಸಂಸದ ಕುಟ್ಟಿಅವರು ಪ್ರಶಂಸೆ ವ್ಯಕ್ತಪಡಿಸಿದ್ದರು.
ಸಿಪಿಎಂನಿಂದ ಎರಡು ಬಾರಿ ಸಂಸದರಾಗಿದ್ದ ಕುಟ್ಟಿಅವರು, 2009ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರನ್ನು ಹೊಗಳಿ ಆ ಪಕ್ಷದಿಂದ ಉಚ್ಚಾಟನೆಗೊಂಡಿದ್ದರು. ನಂತರ ಕಾಂಗ್ರೆಸ್ನಿಂದ 2 ಬಾರಿ ಶಾಸಕರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.