
ತಿರುವನಂತಪುರಂ : ಕೇರಳ ರಾಜಕಾರಣಿಗಳಿಗೆ ಅತ್ಯಂತ ಸಂತಸದ ಸುದ್ದಿಯೊಂದು ಲಭ್ಯವಾಗಿದೆ. ಅವರ ಸಂಬಳವನ್ನು ದ್ವಿಗುಣ ಪ್ರಮಾಣದಲ್ಲಿ ಏರಿಕೆ ಮಾಡಲು ಪ್ರಸ್ತಾವನೆ ಇರಿಸಿದ ಬಿಲ್ ಪಾಸ್ ಮಾಡಲಾಗಿದೆ.
ಭತ್ಯೆಯನ್ನೂ ಕೂಡ ದ್ವಿಗುಣ ಪ್ರಮಾಣದಲ್ಲಿ ಏರಿಕೆ ಮಾಡಲಾಗುತ್ತಿದೆ. ಇದರಡಿಯಲ್ಲಿ ಸ್ಪೀಕರ್, ಡೆಪ್ಯುಟಿ ಸ್ಪೀಕರ್, ಸಚಿವರು, ಶಾಸಕರು ಹಾಗೂ ವಿರೋಧ ಪಕ್ಷಗಳ ನಾಯಕರೂ ಸೇರಿದ್ದಾರೆ. ಏಪ್ರಿಲ್ 1 ರಿಂದಲೇ ಹೊಸ ಸಂಬಳ ನೀತಿ ಜಾರಿಯಾಗಲಿದೆ.
ಸಚಿವರ ಸಂಬಳದಲ್ಲಿ 55 ಸಾವಿರದಿಂದ 90 ಸಾವಿರದವರೆಗೂ ಕೂಡ ಏರಿಕೆ ಕಂಡು ಬಂದಿದೆ. ಇನ್ನು ಶಾಸಕರ ಸಂಬಳದಲ್ಲಿ 39 ಸಾವಿರದಿಂದ 70 ಸಾವಿರದ ವರೆಗೆ ಏರಿಕೆಯಾಗಿದೆ. ನ್ಯಾಯಮೂರ್ತಿ ಜೆ.ಎಂ ಜೇಮ್ಸ್ ಕಮಿಷನ್ ವರದಿಯನ್ನು ಆಧರಿಸಿ ಈ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.