ತಿರುವನಂತಪುರದಲ್ಲಿ RSS ಕಾರ್ಯಕರ್ತನ ಕೊಲೆ: ಘಟನೆ ಖಂಡಿಸಿ ಇಂದು ಕೇರಳ ಬಂದ್

Published : Jul 30, 2017, 02:49 PM ISTUpdated : Apr 11, 2018, 12:43 PM IST
ತಿರುವನಂತಪುರದಲ್ಲಿ  RSS ಕಾರ್ಯಕರ್ತನ  ಕೊಲೆ: ಘಟನೆ ಖಂಡಿಸಿ  ಇಂದು ಕೇರಳ ಬಂದ್

ಸಾರಾಂಶ

ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ಆರ್‌‌ಎಸ್‌‌ಎಸ್‌‌ ಕಾರ್ಯಕರ್ತನೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ತಿರುವನಂತಪುರಂ(ಜು.30): ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ಆರ್‌‌ಎಸ್‌‌ಎಸ್‌‌ ಕಾರ್ಯಕರ್ತನೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ಎ.ರಾಜೇಶ್‌ ಕೊಲೆಯಾದ ಆರ್‌‌ಎಸ್‌‌ಎಸ್‌‌ ಕಾರ್ಯಕರ್ತನಾಗಿದ್ದು, ಸಿಪಿಐ-ಎಂ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. ಶನಿವಾರ ರಾತ್ರಿ ರಾಜೇಶ್‌ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ನಂತರ ರಾಜೇಶ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ರಾಜೇಶ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ರಾಜೇಶ್‌‌ ಕೊಲೆ ಹಿಂದೆ ಸಿಪಿಐ-ಎಂ ಪಕ್ಷದ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೇ, ಇಂದು ಕೇರಳದಾದ್ಯಂತ ಬಿಜೆಪಿ ಬಂದ್‌ ಕರೆ ನೀಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದು ವೈರಸ್ ಎಂಟ್ರಿ, 14 ಕೋಟಿ ರೂ ಕಳೆದುಕೊಂಡು ರ‍್ಯಾಪಿಡೋ ಚಾಲಕನಾದ ಉದ್ಯಮಿ ಕಣ್ಣೀರ ಕತೆ
ಒಂದೇ ವರ್ಷದಲ್ಲಿ 1 ಲಕ್ಷ ಮೌಲ್ಯದ ಕಾಂಡೋಮ್‌‌ ಖರೀದಿ ಮಾಡಿದ ಚೆನ್ನೈ ವ್ಯಕ್ತಿ!