
ಮಂಗಳೂರು (ಫೆ.25): ಸಂಘ ಪರಿವಾರದ ಭಾರೀ ವಿರೋಧದ ನಡುವೆಯೂ ಸಿಪಿಐಎಂ ರ್ಯಾಲಿಯಲ್ಲಿ ಭಾಗವಹಿಸಲು ಕೇರಳ ಸಿಎಂ ಪಿನರಾಯಿ ವಿಜಯನ್ ಮಂಗಳೂರಿಗೆ ಆಗಮಿಸಿದ್ದಾರೆ. ಇವರ ಆಗಮನವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನರ
ನಡೆಸಿದ್ದಾರೆ. ಪಂಡಿತ್ ಹೌಸ್, ಕೋಟೆಕಾರು, ಅಸೈಗೋಳಿಯಲ್ಲಿ ಕಿಡಿಗೇಡಿಗಳು ಟಯರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಬಿ.ಸಿ ರಸ್ತೆಯ ತುಂಬೆ ಎಂಬಲ್ಲಿ ಶಾಲಾ ಬಳಿ ಸರ್ಕಾರಿ ಬಸ್ ಗೆ ಕಲ್ಲೆಸೆತ, ಮಂಜೇಶ್ವರ ಠಾಣಾ ವ್ಯಾಪ್ತಿಯ ತಲಪಾಡಿಯಲ್ಲಿ ಸರ್ಕಾರಿ ಬಸ್ ಗೆ ಕಲ್ಲು ತೂರಾಟ, ಕೋಣಾಜೆ ಗಣೇಶ್ ಮಹಲ್ ಕ್ರಾಸ್ ಬಳಿ ಬಸ್ ಗೆ ಕಲ್ಲೆಸತ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಬಳಿ ಹಿಂದೂ ಜಾಗರಣ ವೇದಿಕೆಯ ಸಂದೀಪ್ ಪಂಪುವೆಲ್, ಸುಭಾಷ್ ಪಡೀಲ್ ಸೇರಿದಂತೆ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.