ಅನಾರೋಗ್ಯದ ಸಮಸ್ಯೆ: ಕೇರಳ ಸಿಎಂ ಚೆನ್ನೈ ಆಸ್ಪತ್ರೆಗೆ ದಾಖಲು

Published : Mar 03, 2018, 04:56 PM ISTUpdated : Apr 11, 2018, 12:42 PM IST
ಅನಾರೋಗ್ಯದ ಸಮಸ್ಯೆ: ಕೇರಳ ಸಿಎಂ ಚೆನ್ನೈ ಆಸ್ಪತ್ರೆಗೆ ದಾಖಲು

ಸಾರಾಂಶ

72 ವರ್ಷದ ವಿಜಯನ್ ಅವರು ಶುಕ್ರವಾರ ಇತ್ತೀಚೆಗೆ ಹತ್ಯೆಯಾದ ಆದಿವಾಸಿ ಯುವಕ ಮಧು ಚಿಂಡಕಿ ಅವರ ಮನೆಗೆ ಭೇಟಿ ನೀಡಿದ ನಂತರ ಆಯಾಸಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ

ಚೆನ್ನೈ(ಮಾ.03): ಅನಾರೋಗ್ಯದ ಸಮಸ್ಯೆ ಹಾಗೂ ವಾಡಿಕೆಯ ವೈದ್ಯಕೀಯ ತಪಾಸಣೆ ಕಾರಣಕ್ಕಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚೆನ್ನೈ'ನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಕ್ರವಾರ ರಾತ್ರಿ ದಾಖಲಾಗಿರುವ ವಿಜಯನ್ ಅವರನ್ನು ಪರಿಣಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಭಾನುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

72 ವರ್ಷದ ವಿಜಯನ್ ಅವರು ಶುಕ್ರವಾರ ಇತ್ತೀಚೆಗೆ ಹತ್ಯೆಯಾದ ಆದಿವಾಸಿ ಯುವಕ ಮಧು ಚಿಂಡಕಿ ಅವರ ಮನೆಗೆ ಭೇಟಿ ನೀಡಿದ ನಂತರ ಆಯಾಸಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲದಿನಗಳ ಹಿಂದಷ್ಟೆ ಗೋವಾ ಸಿಎಂ ಮನೋಹರ್ ಪರ್ರಿಕರ್ ಆರೋಗ್ಯದ ಏರುಪೇರಿನಿಂದ ಚಿಕಿತ್ಸೆಗೆ ಒಳಪಟ್ಟು ಇತ್ತೀಚಿಗಷ್ಟೆ ಡಿಸ್ಚಾರ್ಜ್ ಆಗಿದ್ದರು.              

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
ಮೋದಿ ರೀತಿ ರೈತರಿಗೆ ಟ್ರಂಪ್‌ ಹಣ ವರ್ಗಾವಣೆ