
ತಿರುವನಂತಪುರಂ[ಆ.28]: ಪ್ರಧಾನಿ ಮೋದಿಯನ್ನು ಹೊಗಳಿದ್ದಕ್ಕೆ ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಡವಾಗಿದ್ದು, ವಿವರಣೆ ನೀಡುವಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನೋಟಿಸ್ ಜಾರಿ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಮುಲ್ಲಪ್ಪಾಡಿ ರಾಮಚಂದ್ರನ್ ತರೂರ್ ಈ ಹೇಳಿಕೆಯಿಂದ ಪಕ್ಷದ ಕಾರ್ಯಕರ್ತರಿಗೆ ಅಸಮಾಧಾನವಾಗಿದ್ದು, ಕ್ರಮ ಕೈಗೊಳ್ಳುವಂತೆ ಹಲವು ಲಿಖಿತ ದೂರುಗಳು ಬಂದಿವೆ. ಹಾಗಾಗಿ ನಾವು ಅವರಿಂದ ವಿವರಣೆ ಬಯಸಿದ್ದೇವೆ. ತರೂರ್ ವಿದೇಶದಲ್ಲಿರುವುದರಿಂದ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ . ಅವರಿಂದ ವಿವರಣೆ ಪಡೆದುಕೊಂಡು ಎಐಸಿಸಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಮೋದಿ ಹೊಗಳಿದ ಜೈರಾಂಗೆ ಸಿಂಘ್ವಿ, ತರೂರ್ ಬೆಂಬಲ!
ಕಳೆದ ವಾರ ಕೈ ಹಿರಿಯ ನಾಯಕ ಜೈರಾಂ ರಮೇಶ್ ಮೋದಿ ಹೊಗಳಿದ್ದನ್ನು ಸಿಂಘ್ವಿ ಹಾಗೂ ತರೂರ್ ಬೆಂಬಲಿಸಿದ್ದರು. ತರೂರ್ ಈ ನಡವಳಿಕೆ ಪಕ್ಷದ ನಾಯಕರು ಕೆರಳುವಂತೆ ಮಾಡಿದ್ದು, ಮೋದಿಯನ್ನು ಹೊಗಳುವುದಿದ್ದರೆ ತರೂರ್ ಬಿಜೆಪಿಗೆ ಸೇರಲಿ ಎಂದು ಪಕ್ಷದ ಮತ್ತೊಬ್ಬ ಸಂಸದ ಬೆನ್ನಿ ಬೆಹನ್ನನ್ ಕಿಡಿ ಕಾರಿದ್ದಾರೆ. ಅಲ್ಲದೇ ಈ ವಷಯದಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ತಕ್ಷಣ ಮಧ್ಯಪ್ರವೇಶ ಮಾಡಬೇಕೆಂದು ಸಂಸದ ಟಿ.ಎನ್. ಪ್ರತಾಪನ್ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.