
ತಿರುವನಂತಪುರ[ಜು.23]: ಸಾಮಾನ್ಯವಾಗಿ ಎಡಪಂಥೀಯ ವಿಚಾರಧಾರೆಯುಳ್ಳವರು ಲೆನಿನ್, ಮಾರ್ಕ್ಸ್ ಮುಂತಾದ ಕಮ್ಯುನಿಸ್ಟ್ ಸಿದ್ಧಾಂತಗಳನ್ನು ಓದುವುದು ಸಾಮಾನ್ಯ. ಆದರೆ ಸಿಪಿಎಂ ಶಾಸಕಿಯೊಬ್ಬರು ರಾಮಯಣ ವಾಚಿಸುತ್ತಿರುವ ದೃಶ್ಯ ವೈರಲ್ ಆಗಿದೆ.
ಕೇರಳದ ಕಯಮ್'ಕುಳಂ ಕ್ಷೇತ್ರದ ಶಾಸಕಿ ಯು.ಪ್ರತಿಭಾ ಹರಿ ಅವರು ರಾಮಾಯಣ ವಾಚಿಸುತ್ತಿದ್ದು ಫೇಸ್'ಬುಕ್, ಟ್ವಿಟರ್ ಮುಂತಾದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫೇಸ್'ಬುಕ್ ಈಕೆಯ ವಾಚನದ ದೃಶ್ಯವನ್ನು 132,107 ಮಂದಿ ವೀಕ್ಷಿಸಿದ್ದು ಸಾವಿರಾರು ಮಂದಿ ಶೇರ್ ಮಾಡಿದ್ದಾರೆ.
ವರದಿಗಳ ಪ್ರಕಾರ ಸಿಪಿಎಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕಿ ರಾಮಾಣ ವಾಚಿಸಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಪಿಎಂ, ವೈಯಕ್ತಿಕವಾಗಿ ಪಠಿಸಿದ್ದು ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.