ನಿಪಾಗೆ ಬಲಿಯಾದವರಿಗೆ ವೈದ್ಯನಿಂದಲೇ ಅಂತ್ಯಸಂಸ್ಕಾರ

Published : Jun 07, 2018, 03:48 PM IST
ನಿಪಾಗೆ ಬಲಿಯಾದವರಿಗೆ ವೈದ್ಯನಿಂದಲೇ ಅಂತ್ಯಸಂಸ್ಕಾರ

ಸಾರಾಂಶ

ನಿಪಾ ವೈರಾಣು ಸೋಂಕಿನಿಂದ ಮೃತರಾದವರ ಅಂತ್ಯ ಸಂಸ್ಕಾರ ನಡೆಸಲು ಯಾರೂ ಮುಂದೆ ಬಾರದ ಹಿನ್ನೆಲೆ ಕೇರಳದ ಸರ್ಕಾರಿ ವೈದ್ಯರೊಬ್ಬರು ತಾವೇ ಮುಂದೆ ನಿಂತು ವಿಧಿ-ವಿಧಾನ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೋಳಿಕ್ಕೋಡ್: ‘ನಿಪಾ’ ವೈರಾಣು ಸೋಂಕಿನಿಂದ ಮೃತರಾದವರ ಅಂತ್ಯ ಸಂಸ್ಕಾರ ನಡೆಸಲು ಯಾರೂ ಮುಂದೆ ಬಾರದ ಹಿನ್ನೆಲೆ ಕೇರಳದ ಸರ್ಕಾರಿ ವೈದ್ಯರೊಬ್ಬರು ತಾವೇ ಮುಂದೆ ನಿಂತು ವಿಧಿ-ವಿಧಾನ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೋಳಿಕ್ಕೋಡ್ ನಗರಪಾಲಿಕೆಯ ಆರೋಗ್ಯಾಧಿಕಾರಿ ಡಾ| ಆರ್.ಎಸ್. ಗೋಪಕುಮಾರ್ ಅವರ ಈ ಕೆಲಸ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ವೈದ್ಯರ ಸ್ವಾರ್ಥರಹಿತ ಸೇವೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಸಂಸ್ಕಾರ ನಡೆಸಿದರೂ ಈ ಸೋಂಕು ಹರಡುವ ಹಿನ್ನೆಲೆಯಲ್ಲಿ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕುಟುಂಬದವರೇ ಮುಂದೆ ಬರುತ್ತಿಲ್ಲ. 

ಇಂಥ ವೇಳೆ ಡಾ| ಗೋಪಕುಮಾರ್ ಅವರು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮೂರು ಶವಗಳಿಗೆ  ತಾವೇ ಮುಂದೆ ನಿಂತು ಅಂತಿಮ ಸಂಸ್ಕಾರ ನಡೆಸಿದ್ದರೆ, 12 ಶವಗಳ ಅಂತ್ಯ ಕ್ರಿಯೆಯ ಜವಾಬ್ದಾರಿ ಹೊತ್ತು ಆ ಕಾರ್ಯ ನಿರ್ವಹಿಸಿದ್ದಾರೆ. 

ಕನ್ನಡಿಗನಿಗೂ ಈ ವೈದ್ಯ ನೆರವು: ಡಾ| ಗೋಪಕುಮಾರ್ ಅವರು ಕರ್ನಾಟಕ ಮೂಲದ ಮಹಿಳೆಯೊಬ್ಬಳ ಅಂತ್ಯಸಂಸ್ಕಾರದಲ್ಲೂ ಆಕೆಯ ಗಂಡನಿಗೆ ಭಾರಿ ನೆರವು ನೀಡಿ ಗಮನ ಸೆಳೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧಾರವಾಡ ಹೋರಾಟ ಬೆನ್ನಲ್ಲೇ 56,432 ಹುದ್ದೆ ನೇಮಕಾರಿಗೆ ಸರ್ಕಾರ ಗ್ರೀನ್ ಸಿಗ್ನಲ್; ಆದ್ರೆ ಎಸ್ಸಿ ಒಳಮೀಸಲಾತಿ ಗೋವಿಂದ!
ನ್ಯಾಯಾಂಗದ ವಿರುದ್ಧ ಪಿತೂರಿ: ಎನ್‌ಸಿಇಆರ್‌ಟಿ 8ನೇ ತರಗತಿ ಪಠ್ಯಕ್ಕೆ ಸುಪ್ರೀಂ ತಡೆ! ಅಷ್ಟಕ್ಕೂ ಪಾಠದಲ್ಲೇನಿತ್ತು?