
ಮಲ್ಲಾಪುರಂ(ಜು.07): ಕುಟುಂಬವೊಂದು ಸತ್ತ ವ್ಯಕ್ತಿಯನ್ನು ಹೂಳದೆ ಬದುಕಿ ಬರುತ್ತಾನೆಂಬ ನಂಬಿಕೆಯಿಂದ 3 ತಿಂಗಳಿಂದ ಪೂಜೆ ಮಾಡುತ್ತಿರುವ ಘಟನೆ ಕೇರಳದ ಮಲ್ಲಾಪುರಂ'ನಲ್ಲಿ ನಡೆದಿದೆ.
ಮಲ್ಲಾಪುರಂ'ನ ಮನೆಯೊಂದರಲ್ಲಿ ಧಾರ್ಮಿಕ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿ. ಸಯ್ಯದ್(50) 3 ತಿಂಗಳ ಹಿಂದೆ ಮೃತಪಟ್ಟಿದ್ದರು. ಮತ್ತೆ ಜೀವಸಹಿತ ಎದ್ದೇಳುತ್ತಾನೆಂದು ನಂಬಿದ ಮೃತನ ಪತ್ನಿ,ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಮೃತದೇಹವನ್ನು ಮನೆಯಲ್ಲಿಟ್ಟುಕೊಂಡು ಮಂತ್ರ ಪಠಣಗಳೊಂದಿಗೆ ಪೂಜೆ ಮಾಡುತ್ತಿದ್ದರು.
ಸಂಬಂಧಿಕರೊಬ್ಬರು ದೂರು ನೀಡಿದ ಪರಿಣಾಮ ಸ್ಥಳೀಯ ಶಾಸಕನೊಬ್ಬನ ನೇತೃತ್ವದಲ್ಲಿ ಪೊಲೀಸರು ಮೃತದೇಹವಿದ್ದ ಮನೆಯ ಬಾಗಿಲನ್ನು ತೆಗಿಸಿ ನೋಡಿದಾಗ ಘಟನೆ ಬೆಳಕಿದೆ ಬಂದಿದೆ. ಆಗಾಗಲೇ ದೇಹ ಪೂರ್ತಿ ಕೊಳೆತು ಹೋಗಿ ದುರ್ನಾತ ಬೀರುತ್ತಿತ್ತು. ಈ ಕುಟುಂಬ ಸ್ಥಳೀಯರೊಂದಿಗೆ ಮನಸ್ಥಾಪ ಹೊಂದಿ ಯಾರ ಜೊತೆಗೂ ಹೆಚ್ಚು ಬೆರೆಯದ ಕಾರಣ ವಿಷಯ ಬೇಗ ಬೆಳಕಿಗೆ ಬಂದಿರಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೀಡಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.