
ಕೇರಳ (ಜು. 24): ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವ ಗಣ್ಯರ ಪಟ್ಟಿಯಲ್ಲಿ ಮೋಹನ್ ಲಾಲ್ ಹೆಸರನ್ನು ಸೇರಿಸಬಾರದೆಂದು ಮುಖ್ಯಮಂತ್ರಿಗೆ ಸಾಮೂಹಿಕ ಪತ್ರ ಬರೆದು ಒತ್ತಾಯಿಸಿದ್ದು ಭಾರೀ ಸುದ್ದಿಯಾಗಿತ್ತು.
ಈ ಪತ್ರಕ್ಕೆ 105 ಮಂದಿ ಸಹಿ ಹಾಕಿದ್ದರು. ಅದರಲ್ಲಿ ಪ್ರಕಾಶ್ ರೈ ಕೂಡಾ ಇದ್ದಾರೆ ಎಂದು ಕೇಳಿ ಬಂದಿತ್ತು. ಈ ಬಗ್ಗೆ ಪ್ರಕಾಶ್ ರೈ ಟ್ವಿಟರ್’ನಲ್ಲಿ ಸ್ಪಷ್ಟೀಕರಣ ಕೊಟ್ಟಿದ್ದಾರೆ. ನಾನು ಯಾವುದೇ ಮನವಿ ಪತ್ರಕ್ಕೆ ಸಹಿ ಹಾಕಿಲ್ಲ. ನನಗೆ ಏನೂ ಗೊತ್ತಿಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.