ದೇವರ ನಾಡಲ್ಲಿ ಬಿಡದ ಮಳೆ : ಪರಿತಪಿಸುತ್ತಿರುವ ಜನತೆ

Published : Aug 18, 2018, 09:35 PM ISTUpdated : Sep 09, 2018, 09:44 PM IST
ದೇವರ ನಾಡಲ್ಲಿ ಬಿಡದ ಮಳೆ : ಪರಿತಪಿಸುತ್ತಿರುವ ಜನತೆ

ಸಾರಾಂಶ

ಇಂದು ಕೂಡ 169 ಎನ್ ಡಿಆರ್ ಎಫ್ ತಂಡ ನೆರೆ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ತೊಂದರೆಯಲ್ಲಿರುವವರನ್ನು ಮೇಲೆತ್ತುವ ಹಾಗೂ ಸಂತ್ರಸ್ತರಿಗಾಗಿ ಆಹಾರ ಸಾಮಾಗ್ರಿಗಳನ್ನ ನೀಡಲಾಗುತ್ತಿದೆ.

ತಿರುವನಂತಪುರ[ಆ.18]: ಕೇರಳದಲ್ಲಿ ಮಳೆಯ ಭೀಕರತೆ ಭಾರಿ ಅವಾಂತರ ಸೃಷ್ಟಿಸಿದ್ದು ಬಹುತೇಕ ಜಿಲ್ಲೆಗಳಲ್ಲಿ ಸೂರಿಲ್ಲದ ಜನರು ಪರಿತಪಿಸುತ್ತಿದ್ದಾರೆ.

ತೊಂದರೆಗೀಡಾದ ಎಲ್ಲ ಜಿಲ್ಲೆಗಳಲ್ಲಿ ಎನ್ ಡಿಆರ್ ಎಫ್ ಹಾಗೂ ನೌಕಾ ಸಿಬ್ಬಂದಿ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ. 1924ರ ಬಳಿಕ ಇಷ್ಟು ಮಟ್ಟದಲ್ಲಿ ಸುರಿದ ಮಳೆ ಇದಾಗಿದೆ. ಜನಸಾಮಾನ್ಯರು ಮೃತ್ಯುವಿನ ಜೊತೆ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಇನ್ನೂ11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ 

ಈ ಮದ್ಯೆ ಇಂದು ಕೂಡ 169 ಎನ್ ಡಿಆರ್ ಎಫ್ ತಂಡ ನೆರೆ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ತೊಂದರೆಯಲ್ಲಿರುವವರನ್ನು ಮೇಲೆತ್ತುವ ಹಾಗೂ ಸಂತ್ರಸ್ತರಿಗಾಗಿ ಆಹಾರ ಸಾಮಾಗ್ರಿಗಳನ್ನ ನೀಡಲಾಗುತ್ತಿದೆ. ಸಂತ್ರಸ್ತರಿಗೆ ಅನುಕೂಲವಾಗುವಂತೆ ಕೇರಳ ಸರ್ಕಾರಕ್ಕೆ ಹೆಚ್ಚುವರಿಯಾಗಿ, ಖಾಸಗಿ ವಿಮಾನ ಸಂಚಾರ ನಡೆಸುವಂತೆ ನಾಗರಿಕ ವಿಮಾನಯಾನ ಇಲಾಖೆ ನಿರ್ದೇಶನ ನೀಡಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. 

ಈ ಮಧ್ಯೆ ಭಾರತೀಯ ರೈಲ್ವೆ ಕೂಡ ಸಂತ್ರಸ್ತರ ನೆರವಿಗೆ ಧಾವಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಉಚಿತವಾಗಿ ಸಾಮಾನು ಸರಂಜಾಮು ರವಾನಿಸಲು ನಿರ್ಧರಿಸಿದೆ. ರೌದ್ರ ಮಳೆಗೆ ನಲುಗಿರುವ ಕೇರಳದ ಜನತೆಗೆ ದೇಶದ ವಿವಿಧಡೆಯಿಂದ ನೆರವಿನ ಮಹಾಪೂರವೇ ಹರಿದು ಬರುತ್ತಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ