
ತಿರುವನಂತಪುರ : ಕಾಲೇಜು ಸಮವಸ್ತ್ರ ಧರಿಸಿಕೊಂಡು ಮೀನು ಮಾರುವ ಮೂಲಕ ಸುದ್ದಿಯಾಗಿದ್ದ ಕೇರಳದ ಹನಾನ್ ಅಹ್ಮದ್ ಅಪಘಾತಕ್ಕೆ ಈಡಾಗಿದ್ದಾರೆ.
ಕಾರ್ಯಕ್ರಮವನ್ನು ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಅವರು ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ.
ಕೇರಳದ ತ್ರಿಶ್ಶೂರ್ ನ ಕೊಡಂಗಲ್ಲೂರಿನಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಬರುತ್ತಿದ್ದ ವೇಳೆ ವಾಹನವೊಂದು ಅಡ್ಡಾದಿಡ್ಡಿಯಾಗಿ ಬಂದಿದ್ದು ಅದನ್ನು ತಪ್ಪಿಸಲು ಹೋಗಿ ಎಲೆಕ್ಟ್ರಿಕ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ ಎಂದು ಹನಾನ್ ಪ್ರತಿಕ್ರಿಯಿಸಿದ್ದಾರೆ.
ಅಪಘಾತದಲ್ಲಿ ಸ್ಪೈನ್ ಸ್ಪ್ರಾಕ್ಚರ್ ಆಗಿದ್ದು, ಎರ್ನಾಕುಲಮ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆಕೆಗೆ ಆಸ್ಪತ್ರೆಯಲ್ಲಿ ಪರೀಕ್ಷೆ ಮುಂದುವರಿದಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ತಿಂಗಳು ರಸ್ತೆಯಲ್ಲಿ ಕಾಲೇಜು ಸಮವಸ್ತ್ರ ಧರಿಸಿ ಸುಂದರವಾಗಿ ಮೇಕಪ್ ಹಾಕಿಕೊಂಡು ಮೀನುಮಾರುವ ಮೂಲಕ ಹನಾನ್ ಸಾಕಷ್ಟು ಸುದ್ದಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದರು.
ಇನ್ನು ಕೆಲ ದಿನಗಳ ಹಿಂದಷ್ಟೇ ಕೇರಳದಲ್ಲಿ ಉಂಟಾದ ಪ್ರವಾಹಕ್ಕೆ 1 ಲಕ್ಷ ರು. ನೆರವು ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.