
ತಿರುವನಂತಪುರಂ: ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಭಕ್ತರಿಗೆ ಇರುವ ಸೌಲಭ್ಯದಂತೆ ಶಬರಿ ಮಲೆಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲೂ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಕೇರಳ ಸರ್ಕಾರ ಉದ್ದೇಶಿಸಿದೆ. ಸಿಎಂ ಪಿಣರಾಯಿ ವಿಜಯನ್ ನಿರ್ದೇಶನದಂತೆ ತಜ್ಞರ ತಂಡವೊಂದು ತಿರುಮಲ ಅಭಿವೃದ್ಧಿ ಮಾದರಿ ಅಧ್ಯಯನಕ್ಕೆ ಶೀಘ್ರ ತಿರುಪತಿಗೆ ಭೇಟಿ ನೀಡಲಿದೆ. ಆಂಧ್ರ ಸಿಎಂ ಚಂದ್ರಬಾಬು
ನಾಯ್ಡು ಅವರು ಈ ತಂಡಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ. ಇದೇ ವೇಳೆ ಮಕರ ವಿಳಕ್ಕು (ಸಂಕ್ರಾಂತಿ) ದಿನ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ 255 ಕೋಟಿ ರು. ಆದಾಯ ಬಂದಿದೆ. ಇದು ಕಳೆದ ವರ್ಷಕ್ಕಿಂತ 45 ಕೋಟಿ ರು. ಏರಿಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.