ಪದ್ಮನಾಭ ದೇಗುಲಕ್ಕೆ ಚೂಡಿದಾರ್ ಧರಿಸಿ ಹೋಗುವಂತಿಲ್ಲ : ಹೈಕೋರ್ಟ್

Published : Dec 08, 2016, 10:08 AM ISTUpdated : Apr 11, 2018, 12:58 PM IST
ಪದ್ಮನಾಭ ದೇಗುಲಕ್ಕೆ ಚೂಡಿದಾರ್ ಧರಿಸಿ ಹೋಗುವಂತಿಲ್ಲ : ಹೈಕೋರ್ಟ್

ಸಾರಾಂಶ

ಇಲ್ಲಿನ ಪ್ರಖ್ಯಾತ ಪದ್ಮನಾಭಸ್ವಾಮಿ ದೇವಾಲಯದ ಒಳಗೆ ಮಹಿಳೆಯರು ಚೂಡಿದಾರ, ಸಲ್ವಾರ್ ಕಮೀಜ್ ಧರಿಸಿ ಪ್ರವೇಶಿಸುವುದನ್ನು ಕೇರಳ ಹೈಕೋರ್ಟ್ ನಿಷೇಧಿಸಿದೆ.

ತಿರುವನಂತಪುರಂ (ಡಿ.08): ಇಲ್ಲಿನ ಪ್ರಖ್ಯಾತ ಪದ್ಮನಾಭಸ್ವಾಮಿ ದೇವಾಲಯದ ಒಳಗೆ ಮಹಿಳೆಯರು ಚೂಡಿದಾರ, ಸಲ್ವಾರ್ ಕಮೀಜ್ ಧರಿಸಿ ಪ್ರವೇಶಿಸುವುದನ್ನು ಕೇರಳ ಹೈಕೋರ್ಟ್ ನಿಷೇಧಿಸಿದೆ.

ದೇವಸ್ಥಾನದ ಸಂಪ್ರದಾಯದ ಪ್ರಕಾರ ಚೂಡಿದಾರ್ ಅಥವಾ ಸಲ್ವಾರನ್ನು ಧರಿಸಿ ಪ್ರವೇಶಿಸುವಂತಿಲ್ಲ. ಒಂದು ವೇಳೆ ಚೂಡಿದಾರ್ ಧರಿಸಿದ್ದರೆ ಸೊಂಟಕ್ಕೆ ಧೋತಿಯನ್ನು ಸುತ್ತಿಕೊಳ್ಳಬೇಕು. ಸೀರೆಯನ್ನು ಧರಿಸಿರುವ ಮಹಿಳೆಯರಿಗೆ ಮಾತ್ರ ಪ್ರವೇಶಕ್ಕೆ

ಅವಕಾಶ  ನೀಡಲಾಗುವುದು ಎಂದು ಉಚ್ಚ ನ್ಯಾಯಾಲಯ ಹೇಳಿದೆ.

ಕಳೆದ ತಿಂಗಳು ದೇವಾಲಯ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಚೂಡಿದಾರ್ ಧರಿಸಿರುವ ಮಹಿಳೆಯರಿಗೆ ದೇವಸ್ಥಾನದ ಒಳಭಾಗ ಪ್ರವೇಶಿಸಲು ಅವಕಾಶ ನೀಡಿದ್ದರು. ಇದು ಸಂಬಂಧಪಟ್ಟ ಕೆಲ ಅಧಿಕಾರಿಗಳು ಹಾಗೂ ಭಕ್ತಾದಿಗಳ

ಪ್ರತಿಭಟನೆಗೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು