ಸಚಿವರಾದ JDS ರಾಜ್ಯಾಧ್ಯಕ್ಷ : ಬದಲಾವಣೆ ?

Published : Jun 16, 2019, 11:49 AM IST
ಸಚಿವರಾದ JDS ರಾಜ್ಯಾಧ್ಯಕ್ಷ : ಬದಲಾವಣೆ ?

ಸಾರಾಂಶ

ಜೆಡಿಎಸ್ ರಾಜ್ಯಾಧ್ಯಕ್ಷ ಸಚಿವರಾಗಿ ನೇಮಕವಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ನೇಮಕ ಶೀಘ್ರದಲ್ಲೇ ಆಗುವ ಸಾಧ್ಯತೆ ಇದೆ. 

ಬೆಂಗಳೂರು :  ನೆರೆ ರಾಜ್ಯ ಕೇರಳದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಕುರಿತು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಸಭೆ ನಡೆಸಿದ್ದು, ಶೀಘ್ರದಲ್ಲಿಯೇ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಜೆಡಿಎಸ್‌ನ ಕೇರಳ ರಾಜ್ಯದ ಅಧ್ಯಕ್ಷ ಕೃಷ್ಣನ್‌ ಕುಟ್ಟಿಅವರು ಕಮ್ಯೂನಿಸ್ಟ್‌ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. 

ಎರಡು ಹುದ್ದೆಗಳನ್ನು ನಿಭಾಯಿಸಲು ಕಷ್ಟವಾಗುತ್ತಿರುವ ಕಾರಣ ರಾಜ್ಯಾಧ್ಯಕ್ಷರನ್ನು ಬದಲಿಸುವಂತೆ ಕೇರಳ ಜೆಡಿಎಸ್‌ನ ಮುಖಂಡರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲನೆ ನಡೆಸಿ ಶೀಘ್ರದಲ್ಲಿಯೇ ನೇಮಕ ಮಾಡುವ ಬಗ್ಗೆ ದೇವೇಗೌಡ ಅವರು ಭರವಸೆ ನೀಡಿದ್ದಾರೆ.

ಶನಿವಾರ ಕೇರಳದ ಜೆಡಿಎಸ್‌ ಮುಖಂಡರಾದ ಕೃಷ್ಣನ್‌ ಕುಟ್ಟಿ, ಮ್ಯಾಥ್ಯೂ ಟಿ.ಥಾಮಸ್‌, ಮುರುಗದಾಸ್‌ ಸೇರಿದಂತೆ ಇತರರು ಆಗಮಿಸಿ ದೇವೇಗೌಡರ ಬಳಿ ಸಮಾಲೋಚಿಸಿದರು. 2021ಕ್ಕೆ ಕೇರಳದಲ್ಲಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟನೆಗೊಳಿಸಬೇಕಿದೆ.

ಹೀಗಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷರನ್ನು ಬದಲಿಸುವಂತೆ ಮನವಿ ಮಾಡಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕೇರಳ ರಾಜ್ಯದ ಜೆಡಿಎಸ್‌ ನಾಯಕರೊಂದಿಗೆ ಮಾತುಕತೆ ನಡೆಸಿದರು. ಪ್ರಮುಖ ಪದಾಧಿಕಾರಿಗಳ ಬದಲಾವಣೆ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್