ಐಎಎಸ್​ ಅಧಿಕಾರಿಯ ಮದ್ಯದ ಅಮಲಿಗೆ ಪತ್ರಕರ್ತ ಬಲಿ

Published : Aug 03, 2019, 05:39 PM IST
ಐಎಎಸ್​ ಅಧಿಕಾರಿಯ ಮದ್ಯದ ಅಮಲಿಗೆ ಪತ್ರಕರ್ತ ಬಲಿ

ಸಾರಾಂಶ

ಮದ್ಯದ ನಶೆಯಲ್ಲಿ ಪತ್ರಕರ್ತನ ಮೇಲೆ ಕಾರು ಹತ್ತಿಸಿದ ಐಎಎಸ್ ಅಧಿಕಾರಿ| ಬೈಕ್ ನಲ್ಲಿ ತೆರಳುತ್ತಿದ್ದ ಮಲೆಯಾಳಂ ದಿನಪತ್ರಿಕೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಸಾವು|

ತಿರುವನಂತಪುರಂ (ಆ.03): ಐಎಎಸ್​ ಅಧಿಕಾರಿಯೋಬ್ಬರ ಕಾರಿಗೆ ಪತ್ರಕರ್ತ ಬಲಿಯಾದ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ಮಲೆಯಾಳಂ ದಿನಪತ್ರಿಕೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಕೆ.ಎಂ.ಬಶೀರ್ (35) ಅಪಘಾತದಲ್ಲಿ ಮೃತ ದುರ್ದವೈ. ಐಎಎಸ್ ಅಧಿಕಾರಿ ಶ್ರೀರಾಂ ವೆಂಕಟರಾಮನ್ ಅವರು ಶುಕ್ರವಾರ ತಡರಾತ್ರಿ ಕುಡಿದ ಮತ್ತಿನಲ್ಲಿ ಕಾರು ವೇಗವಾಗಿ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಈ ಬಗ್ಗೆ  ಪೊಲೀಸರು ಮಾಹಿತಿ ನೀಡಿದ್ದು. ಕಾರಿನಲ್ಲಿ ಓರ್ವ ಮಹಿಳೆ ಕೂಡ ಇದ್ದರು. ಆದರೆ, ಅಪಘಾತದ ಬಗ್ಗೆ ಅವರು ಹಲವು ಗೊಂದಲಮಯ ಹೇಳಿಕೆಗಳನ್ನು ನೀಡಿದ್ದಾರೆ.  ಕಡೆಗೆ ಹೆಸರು ಹೇಳಲು ಇಚ್ಛಿಸದ ಕೆಲವರು ನೀಡಿದ ಮಾಹಿತಿಯಿಂದ ಶ್ರೀರಾಮ್​ ಅವರೇ ಕಾರು ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಶ್ರೀರಾಮ್​ ಅವರು ಮದ್ಯ ಸೇವಿಸಿದ್ದರಾ ಎಂಬ ಪರೀಕ್ಷೆ ನಡೆಸುವುದಕ್ಕೋಸ್ಕರ ಅವರ ರಕ್ತದ ಮಾದರಿ ತೆಗೆದುಕೊಳ್ಳಲು ಪ್ರಯತ್ನಿಸಲಾಯಿತು. ಆದರೆ, ಅವರು ಮೊದಲು ರಕ್ತ ಕೊಡಲು ನಿರಾಕರಿಸಿದರು.

 ಯಾರಾದರೂ ರಕ್ತ ಮಾದರಿ ನೀಡಲು ಹೀಗೆ ನಿರಾಕರಿಸಿದರೆ ನಂತರ ಕಾನೂನು ಪ್ರಕ್ರಿಯೆ ನಡೆಸಲಾಗುತ್ತದೆ. ಅವರನ್ನು ಬಂಧಿಸಿ, ಸರ್ಕಾರಿ ಆಸ್ಪತ್ರೆ ವೈದ್ಯರಿಂದ ರಕ್ತ ಪರೀಕ್ಷೆ ನಡೆಸಲಾಗುತ್ತದೆ. ಆದರೆ, ಶ್ರೀರಾಮ್​ ಅವರು ಕೊನೆಗೆ ರಕ್ತ ಪರೀಕ್ಷೆಗೆ ಒಳಗಾದರು. ಅವರು ಮದ್ಯ ಸೇವಿಸಿದ್ದರು ಎಂಬುದು ಪ್ರಾಥಮಿಕ ವೈದ್ಯಕೀಯ ವರದಿಯಲ್ಲೇ ಪತ್ತೆಯಾಗಿದೆ ಎಂದು ತಿರುವನಂತಪುರ ಪೊಲೀಸ್​ ವರಿಷ್ಠಾಧಿಕಾರಿ ಧಿನೇಂದ್ರ ಕಶ್ಯಪ್​ ಮಾಹಿತಿ ನೀಡಿದ್ದಾರೆ.

ಇದೇ ಸುದ್ದಿಯನ್ನು ಇಂಗ್ಲೀಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನ್ಯಾ। ಸ್ವಾಮಿನಾಥನ್‌ ವಾಗ್ದಂಡನೆಗೆ 56 ನಿವೃತ್ತ ಜಡ್ಜ್‌ಗಳ ಕಿಡಿ
ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲದಿದ್ದರೆ 3ನೇ ವಿಶ್ವಯುದ್ಧ : ಟ್ರಂಪ್‌ ಎಚ್ಚರಿಕೆ