ಬೇಲ್ ಪಡೆದ ಶಶಿಕಲಾಗೆ ಶಬರಿಮಲೆ ಎಂಟ್ರಿಗೆ ಅವಕಾಶ

Published : Nov 19, 2018, 12:42 PM ISTUpdated : Nov 19, 2018, 01:05 PM IST
ಬೇಲ್ ಪಡೆದ ಶಶಿಕಲಾಗೆ ಶಬರಿಮಲೆ ಎಂಟ್ರಿಗೆ ಅವಕಾಶ

ಸಾರಾಂಶ

ಬಂಧಿತರಾಗಿ ಜೈಲು ಸೇರಿದ್ದ ಶಶಿಕಲಾಗೆ ಇದೀಗ ಬೇಲ್ ಸಿಕ್ಕು ಬಿಡುಗಡೆಯಾಗಿದ್ದು ಶಬರಿಮಲೆ ದೇಗುಲ ಪ್ರವೇಶಕ್ಕೆ ಅನುಮತಿ ದೊರೆತಿದೆ. 

ತಿರುವನಂತಪುರ : ಅಯ್ಯಪ್ಪ ದರ್ಶನಕ್ಕೆ ತೆರಳುವಾಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಹಿಂದೂ ಐಕ್ಯ ವೇದಿ ಮುಖ್ಯಸ್ಥೆ ಶಶಿಕಲಾ ಟೀಚರ್ ಗೆ ಇದೀಗ ಅಯ್ಯಪ್ಪನ ದರ್ಶನ ಪಡೆಯಲು ಅನುಮತಿ ನೀಡಲಾಗಿದೆ. 

ಶುಕ್ರವಾರ ರಾತ್ರಿ ಅಯ್ಯಪ್ಪ ದೇಗುಲಕ್ಕೆ ತೆರಳುತ್ತಿದ್ದ ಅವರನ್ನು ರಾತ್ರಿ ವೇಳೆ ಬಂಧನಕ್ಕೆ ಒಳಪಡಿಸಲಾಗಿತ್ತು. ಇದೀಗ ಪೊಲೀಸರ ವಶದಲ್ಲಿದ್ದ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದು, ದರ್ಶನಕ್ಕೆ ಅವಕಾಶ ನೀಡಲಾಗಿದೆ. 

ಶಶಿಕಲಾ ಟೀಚರ್ ಬಂಧನವಾಗುತ್ತಿದ್ದಂತೆ ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಯುದಿದ್ದು, ಈ ನಿಟ್ಟಿನಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ 6 ಗಂಟೆಗಳ ಒಳಗೆ ಅಯ್ಯಪ್ಪ ದರ್ಶನ ಪಡೆಯಲು ಷರತ್ತನ್ನೂ ಕೂಡ ವಿಧಿಸಲಾಗಿದೆ. 

ಕಳೆದ ಬಾರಿ ನೇಕ ಮಹಿಳೆಯರು ದೇಗುಲವನ್ನು ಪ್ರವೇಶಿಸಲು ಯತ್ನಿಸಿದ್ದರು. ಅಲ್ಲದೇ ಈ ವೇಳೆ ಭಾರಿ ಪ್ರಮಾಣದಲ್ಲಿ ಪ್ರತಿಭಟನೆ ನಡೆದು ಪ್ರವೇಶಿಸುವ ಯತ್ನ ವಿಫಲವಾಗಿತ್ತು.

ರಾತ್ರೋ ರಾತ್ರಿ ಶಬರಿಮಲೆಗೆ ಬಂದ ಮಹಿಳೆ ಅರೆಸ್ಟ್ : ಯಾರಾಕೆ..?

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್
ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ