ಪ್ರವಾಹದಿಂದ ತತ್ತರಿಸಿದ ಕೇರಳ ಮತ್ತೆ ನಡುಗುತ್ತಿದೆ

Published : Jan 08, 2019, 03:36 PM IST
ಪ್ರವಾಹದಿಂದ ತತ್ತರಿಸಿದ ಕೇರಳ ಮತ್ತೆ ನಡುಗುತ್ತಿದೆ

ಸಾರಾಂಶ

ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ತತ್ತರಿಸಿದ್ದ ಕೇರಳ ಇದೀಗ ಮತ್ತೊಮ್ಮೆ ನಡುಗುತ್ತಿದೆ. ಕೇರಳದಲ್ಲಿ ಅತ್ಯಂತ ಕಡಿಮೆ ದಾಖಲಾಗಿದೆ. 

ತಿರುವನಂತಪುರ: ಕಳೆದ ಕೆಲ ದಿನಗಳಿಂದ ದಕ್ಷಿಣ ಭಾರತದಾದ್ಯಂತ ಜನಸಾಮಾನ್ಯರನ್ನು ಕಂಗೆಡಿಸಿರುವ ಚಳಿ, ಇದೀಗ ಕೇರಳದಲ್ಲಿ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. 

ಭಾನುವಾರ ರಾತ್ರಿ ಕೇರಳದ ಪ್ರಸಿದ್ಧ ತಾಣಗಳಲ್ಲಿ ಒಂದಾದ ಮುನ್ನಾರ್‌ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೈನಸ್‌ 3 ಡಿ.ಸೆ.ನಷ್ಟುತಾಪಮಾನ ದಾಖಲಾಗಿದೆ. 

ಪ್ರವಾಸಿಗರ ಸ್ವರ್ಗ ಎನ್ನಿಸಿಕೊಂಡಿರುವ ಮುನ್ನಾರ್‌ ಮತ್ತಿತರ ಪ್ರದೇಶಗಳಲ್ಲಿ ಉಷ್ಣಾಂಶ ಸದಾ ಕಡಿಮೆ ಇರುತ್ತದೆಯಾದರೂ, ಭಾನುವಾರ ತಾಪಮಾನ್ಯ ಶೂನ್ಯಕ್ಕಿಂತ ಕೆಳಗೆ ಇಳಿದ ಪರಿಣಾಮ, ಪ್ರವಾಸಿಗರು ಸ್ವಲ್ಪ ಮಟ್ಟಿಗೆ ಭಾರೀ ಚಳಿಯ ಬಿಸಿ ಅನುಭವಿಸುವಂತಾಯಿತು.

ಆದರೂ ಮುನ್ನಾರ್‌ ಸುತ್ತಮುತ್ತಲ ಪ್ರದೇಶಗಳಲ್ಲಿ ಇದೀಗ ಹಿಮಾಚ್ಛಾದಿತ ವಾತಾವರಣ ಇದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಭಾರೀ ಪ್ರವಾಹದಿಂದಾಗಿ ಪ್ರವಾಸಿಗರನ್ನು ಕಳೆದುಕೊಂಡಿದ್ದ ಕೇರಳಕ್ಕೆ, ಚಳಿ ಇದೀಗ ಪ್ರವಾಸಿಗರನ್ನು ಮತ್ತೆ ತಂದುಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ