
ತಿರುವನಂತಪುರ: ಹಸಿವೆಂದು ಅಂಗಡಿಯಲ್ಲಿ ಅಕ್ಕಿ ಕದ್ದ ಆದಿವಾಸಿ ಸಮುದಾಯದ ವ್ಯಕ್ತಿಯೊಬ್ಬನನ್ನು ಕೆಲ ವ್ಯಕ್ತಿಗಳು ಬಡಿದು ಕೊಂದ ಭೀಕರ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ ನಡೆದಿದೆ.
ಇಷ್ಟುಸಾಲದೆಂಬಂತೆ ಆತನ ಮೇಲೆ ಹಲ್ಲೆ ನಡೆಸುವ ವೇಳೆ ಕೆಲ ವ್ಯಕ್ತಿಗಳು ಹಲ್ಲೆಗೊಳಗಾದ ವ್ಯಕ್ತಿ ಕಾಣುವಂತೆ ಸೆಲ್ಫಿ ತೆಗೆದುಕೊಂಡು ವಿಕೃತ ಮನಸ್ಥಿತಿ ಮೆರೆದಿದ್ದಾರೆ. ಈ ಘಟನೆಗೆ ರಾಜ್ಯದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಏನಾಯ್ತು?: ಮಧು (27) ಎಂಬ ಆದಿ ವಾಸಿ ಸಮುದಾಯದ ವ್ಯಕ್ತಿ ಗುರುವಾರ ಅಂಗಡಿಯೊಂದರಲ್ಲಿ 200 ರು. ಬೆಲೆಬಾಳುವ ಅಕ್ಕಿ ಕದ್ದಿದ್ದಾನೆ. ಇದನ್ನು ನೋಡಿದ ಕೆಲ ವ್ಯಕ್ತಿಗಳು ಆತನನ್ನು ಮರಕ್ಕೆ ಕಟ್ಟಿಮನಸೋಇಚ್ಛೆ ತಳಿಸಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ ಗುಂಪಿಗೆ ಸೇರಿದ ಕೆಲ ವ್ಯಕ್ತಿಗಳು, ಹಲ್ಲೆಗೊಳಗಾದ ವ್ಯಕ್ತಿ ಹಿನ್ನೆಲೆಯಲ್ಲಿ ಕಾಣುವಂತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಮಧುನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆದರೆ ಪೊಲೀಸರು, ಮಧುನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆತ ರಕ್ತವಾಂತಿ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಮೂವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.