
ನವದೆಹಲಿ(ಫೆ.13): ಸೀಮೆ ಎಣ್ಣೆ ಬಳಕೆ ಕಡಿಮೆ ಮಾಡಲು ನಾನಾ ಯೋಜನೆಗಳನ್ನು ರೂಪಿಸುತ್ತಿರುವ ಕೇಂದ್ರ ಸರ್ಕಾರ, ಇದೀಗ ಸೀಮೆಎಣ್ಣೆ ಮಾರಾಟ ಮಳಿಗೆಗಳಲ್ಲಿ 5 ಕೆ.ಜಿ ತೂಕದ ಚಿಕ್ಕ ಅಡುಗೆ ಅನಿಲದ ಸಿಲಿಂಡರ್ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಿದೆ.
ಸೀಮೆಎಣ್ಣೆ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ, ಪಂಜಾಬ್ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ವಿಶೇಷ ಅನುದಾನ ನೀಡುತ್ತಿರುವ ಹಿನ್ನೆಲೆಯಲ್ಲಿ, ಹೊಸ ಯೋಜನೆ ಕೂಡಾ ಕರ್ನಾಟಕದಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಹೀಗಾದಲ್ಲಿ ಮಾಸಿಕ 75 ಸಾವಿರ ಲೀಟರ್'ಗಿಂತ ಕಡಿಮೆ ಸೀಮೆಎಣ್ಣೆ ಮಾರಾಟ ಮಳಿಗೆಗಳಲ್ಲಿ 5 ಕೆಜಿ ತೂಕದ ಎಲ್'ಪಿಜಿ ಸಿಲಿಂಡರ್'ಗಳು ಮಾರಾಟಕ್ಕೆ ಲಭ್ಯವಾಗಲಿದೆ.
ಸೀಮೆಎಣ್ಣೆ ಬಳಕೆ ಕಡಿಮೆ ಆದ ಬಳಿಕ ಮಾರಾಟಗಾರರು ಆದಾಯ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹೊಸ ಯೋಜನೆ ಅವರಿಗೂ ಆರ್ಥಿಕವಾಗಿ ಲಾಭ ತರಲಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಅಭಿಪ್ರಾಯಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.