ರಾಜೀವ್ ಹತ್ಯೆಯ ಸಾಕ್ಷಿದಾರನಿಂದ ಮೋದಿಗೆ ಪತ್ರ

Published : Dec 25, 2016, 01:08 PM ISTUpdated : Apr 11, 2018, 12:53 PM IST
ರಾಜೀವ್ ಹತ್ಯೆಯ ಸಾಕ್ಷಿದಾರನಿಂದ ಮೋದಿಗೆ ಪತ್ರ

ಸಾರಾಂಶ

ರಾಜೀವ್ ಗಾಂಧಿಯವರು ಮೇ.22, 1991ರಂದು ತಮಿಳುನಾಡಿನ ಶ್ರೀಪೆರಂಬದೂರುವಿನಲ್ಲಿ ಮಾನವ ಬಾಂಬ್ ಸ್ಫೋಟಕ್ಕೆ ಬಲಿಯಾಗಿದ್ದರು.

ನವದೆಹಲಿ(ಡಿ.25): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಬಗ್ಗೆ ನ್ಯಾಯಸಮ್ಮತ ತನಿಖೆಯ ಭರವಸೆ ಮತ್ತು ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಮುಖ ಸಾಕ್ಷಿದಾರ ಪತ್ರ ಬರೆದಿದ್ದಾರೆ.

"ರಾಜೀವ್ ಗಾಂಧಿ ಅವರ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರ ನಾನಾಗಿದ್ದೇನೆ. ಈ ಬಗ್ಗೆ ಸಿಬಿಐ ಪೂರಕ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಹಾಗಾಗಿ, ನ್ಯಾಯಸಮ್ಮತದ ತನಿಖೆಗೆ ನಿಮ್ಮ ವೈಯಕ್ತಿಕ ಮಧ್ಯಸ್ಥಿಕೆಯ ಅಗತ್ಯವಿದೆ,’’ ಎಂದು ಸಾಕ್ಷಿದಾರ ರಮೇಶ್ ದಲಾಲ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ರಾಜೀವ್ ಗಾಂಧಿ ಹತ್ಯೆ ಹಿಂದಿನ ಪಿತೂರಿ ತನಿಖೆಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ರಾಜೀವ್ ಗಾಂಧಿಯವರು ಮೇ.22, 1991ರಂದು ತಮಿಳುನಾಡಿನ ಶ್ರೀಪೆರಂಬದೂರುವಿನಲ್ಲಿ ಮಾನವ ಬಾಂಬ್ ಸ್ಫೋಟಕ್ಕೆ ಬಲಿಯಾಗಿದ್ದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ