ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ: ಯು.ಟಿ ಖಾದರ್

Published : Feb 28, 2017, 04:31 PM ISTUpdated : Apr 11, 2018, 12:44 PM IST
ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ: ಯು.ಟಿ ಖಾದರ್

ಸಾರಾಂಶ

ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್, ನಾನು ಯಾರನ್ನು ಅವಮಾನ, ನೋವು ಮಾಡಲು ಈ ಹೇಳಿಕೆ ನೀಡಿಲ್ಲವೆಂದು ಹೇಳಿದ್ದಾರೆ.

ಮಂಗಳೂರು (ಫೆ.28): ಕೇರಳ ಸಿಎಂ ಪಿಣರಾಯಿ ವಿಜಯನ್ ಬಂದಾಗ ಸಂವಿಧಾನ ವಿರೋಧಿಯಾಗಿ ಬಂದ್ ಮಾಡುವವರು ಪಿಣರಾಯಿ ವಿಜಯನ್ ಅವರ ಚಪ್ಪಲಿಗೂ ಸಮಾನರಲ್ಲ ಎಂಬ ವಿವಾದಾತ್ಮಕ ಹೇಳಿಕೆಯು ಮಾತಿನ ನಡುವೆ ಬಾಯಿ ತಪ್ಪಿನಿಂದ ಬಂದಿದೆ. ಈ ಬಗ್ಗೆ ವಿಷಾದವಿದೆ , ಆದರೆ ಕ್ಷಮೆ ಕೇಳುವುದಿಲ್ಲ  ಎಂದು  ಸಚಿವ ಯು .ಟಿ ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್ ನಾನು ಯಾರನ್ನು ಅವಮಾನ, ನೋವು ಮಾಡಲು ಈ ಹೇಳಿಕೆ ನೀಡಿಲ್ಲವೆಂದು ಹೇಳಿದ್ದಾರೆ.

ದೇಶಕ್ಕೆ ಪಾಕಿಸ್ತಾನ ಪ್ರಧಾನ ಮಂತ್ರಿ ಬಂದಾಗ ಯಾರು ವಿರೋಧಿಸಿಲ್ಲ. ಹಿರಿಯರಾದ ಮತ್ತು ಬಿಲ್ಲವ ಸಮುದಾಯದಿಂದ ಬಂದಂತಹ ದೇಶದ ಏಕೈಕ ಸಿಎಂ ಮಂಗಳೂರಿಗೆ ಬಂದಾಗ ವಿರೋಧಿಸಿ ಬಂದ್ ನಡೆಸಿದ್ದಾರೆ, ಸಿಪಿಎಂ ಕಚೇರಿಗೆ ಬೆಂಕಿ, ಬಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದೆಲ್ಲ ಸಂವಿಧಾನ ಬಾಹಿರ. ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ ಎಂಬ ಕಾರಣಕ್ಕೆ ಮಾತನಾಡಿದ್ದೇನೆಂದು ಖಾದರ್ ಹೇಳಿದ್ದಾರೆ.

ಇದೊಂದು ಜಾನಪದ ನುಡಿಮುತ್ತಿನಂತೆ ಬಂದ ಪದ. ಈ ಬಗ್ಗೆ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ ಮತ್ತು ನನ್ನ ಸಣ್ಣ ಮಗಳು ಕೂಡ ಹೀಗೆ ಮಾತನಾಡಿದ್ದು ತಪ್ಪು ಎಂದಿದ್ದಾರೆ. ಮುಂದೆ ಈ ರೀತಿ ಮಾತನಾಡುವುದಿಲ್ಲವೆಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ