ಹಜ್ ಯಾತ್ರೆ ಸಬ್ಸಿಡಿ ಸ್ಥಗಿತ : ಖಾದರ್ ಸ್ವಾಗತ

Published : Jan 18, 2018, 03:07 PM ISTUpdated : Apr 11, 2018, 12:35 PM IST
ಹಜ್ ಯಾತ್ರೆ ಸಬ್ಸಿಡಿ ಸ್ಥಗಿತ : ಖಾದರ್ ಸ್ವಾಗತ

ಸಾರಾಂಶ

ಹಜ್ ಯಾತ್ರೆಗೆ ಸಬ್ಸಿಡಿ ಇದ್ದಾಗ ಪೂರ್ವ ನಿಗದಿಯಂತೆ ಯಾತ್ರಿಕರು ಏರ್ ಇಂಡಿಯಾ ವಿಮಾನದಲ್ಲೇ ತೆರಳುತ್ತಿದ್ದರು. ಇದರಿಂದ ಏರ್ ಇಂಡಿಯಾಕ್ಕೆ ಲಾಭವಾಗುತ್ತಿತ್ತು. ಈಗ ಸಬ್ಸಿಡಿ ನಿಲ್ಲಿಸಿದ್ದರಿಂದ ಅದಕ್ಕಿಂತಲೂ ಕಡಿಮೆ ದರದ ವಿಮಾನಗಳಲ್ಲಿ ಹೋಗಲು ಅವಕಾಶ ದೊರೆತಂತಾಗಿದೆ.

ಮಂಗಳೂರು(ಜ.18): ಹಜ್ ಯಾತ್ರಿಗಳಿಗೆ ನೀಡುವ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿರುವುದನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆದರೆ, ಯಾರನ್ನೋ ಸಂತೋಷಪಡಿಸಲು ಇಂತಹ ನಿರ್ಧಾರ ಸರಿಯಲ್ಲ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಮರು ಹಜ್ ಯಾತ್ರೆಗೆ ಹೋಗುವುದು ಕಡ್ಡಾಯ. ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತದೆ ಎಂಬ ಕಾರಣಕ್ಕೆ ಅವರೇನೂ ಯಾತ್ರೆಗೆ ಹೋಗುವುದಿಲ್ಲ. ಹಜ್ ಯಾತ್ರೆಗೆ ಸಬ್ಸಿಡಿ ಇದ್ದಾಗ ಪೂರ್ವ ನಿಗದಿಯಂತೆ ಯಾತ್ರಿಕರು ಏರ್ ಇಂಡಿಯಾ ವಿಮಾನದಲ್ಲೇ ತೆರಳುತ್ತಿದ್ದರು. ಇದರಿಂದ ಏರ್ ಇಂಡಿಯಾಕ್ಕೆ ಲಾಭವಾಗುತ್ತಿತ್ತು. ಈಗ ಸಬ್ಸಿಡಿ ನಿಲ್ಲಿಸಿದ್ದರಿಂದ ಅದಕ್ಕಿಂತಲೂ ಕಡಿಮೆ ದರದ ವಿಮಾನಗಳಲ್ಲಿ ಹೋಗಲು ಅವಕಾಶ ದೊರೆತಂತಾಗಿದೆ. ಯಾತ್ರಿಗಳಿಗೆ ವೈಯಕ್ತಿಕವಾಗಿ ಇದರಿಂದ ದೊಡ್ಡ ಹೊರೆಯಾಗದು ಎಂದರು.

ಹಜ್ ಸಬ್ಸಿಡಿ ಪ್ರಶ್ನಿಸಿ ವ್ಯಕ್ತಿಯೊಬ್ಬರು ಕೋಟ್'ಗೆರ್ ಹೋದಾಗ, ಪ್ರತಿವರ್ಷ ಶೇ.10ರಷ್ಟು ಕಡಿತ ಮಾಡಿ, 10 ವರ್ಷಗಳಲ್ಲಿ ಸಂಪೂರ್ಣ ಸಬ್ಸಿಡಿ ನಿಲ್ಲಿಸುವಂತೆ ನ್ಯಾಯಾಲಯ 2012ರಲ್ಲೇ ಆದೇಶಿಸಿತ್ತು. ಈ ಆದೇಶದಂತೆ 2022ರಲ್ಲಿ ಸಬ್ಸಿಡಿ ಸಂಪೂರ್ಣ ಕಡಿತ ಆಗಬೇಕಿತ್ತು. ಆದರೆ, ಐದೇ ವರ್ಷಗಳಲ್ಲಿ ಸಂಪೂರ್ಣ ಸಬ್ಸಿಡಿ ನಿಲ್ಲಿಸಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!