ಖಾದಿ ಕ್ಯಾಲೆಂಡರ್ ವಿವಾದ: ಮಂಗಳಯಾನ ಪ್ರಭಾವವೆಂದ ರಾಹುಲ್ ಟೀಕೆ

Published : Jan 13, 2017, 01:12 PM ISTUpdated : Apr 11, 2018, 01:11 PM IST
ಖಾದಿ ಕ್ಯಾಲೆಂಡರ್ ವಿವಾದ: ಮಂಗಳಯಾನ ಪ್ರಭಾವವೆಂದ ರಾಹುಲ್ ಟೀಕೆ

ಸಾರಾಂಶ

ಖಾದಿ ಉದ್ಯೋಗ್ ಕ್ಯಾಲೆಂಡರ್ ಹಾಗೂ ಡೈರಿಯಲ್ಲಿ ದೇಶದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಾಗದಲ್ಲಿ ಪ್ರಧಾನಿ ಮೋದಿಯವರು ಕಾಣಿಸಿಕೊಂಡಿರುವುದು ರಾಹುಲ್ ಗಾಂಧಿಗೆ ಟೀಕೆ ಮಾಡಲು ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ನವದೆಹಲಿ (ಜ.13): ಖಾದಿ ಉದ್ಯೋಗ್ ಕ್ಯಾಲೆಂಡರ್ ಹಾಗೂ ಡೈರಿಯಲ್ಲಿ ದೇಶದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಾಗದಲ್ಲಿ ಪ್ರಧಾನಿ ಮೋದಿಯವರು ಕಾಣಿಸಿಕೊಂಡಿರುವುದು ರಾಹುಲ್ ಗಾಂಧಿಗೆ ಟೀಕೆ ಮಾಡಲು ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ಇದನ್ನು 'ಮಂಗಳಯಾನ ಪ್ರಭಾವ' ಎಂದಿರುವ ರಾಹುಲ್ ಗಾಂಧಿ, ಖಾದಿ ಗ್ರಾಮೋದ್ಯಮಕ್ಕೆ ಉತ್ತೇಜನ ನೀಡಿ ಅದರ ಸಂಪೂರ್ಣ ಕ್ರೆಡಿಟ್ ತೆಗೆದುಕೊಳ್ಳಲು ಮೋದಿಜಿ ಪ್ರಯತ್ನಿಸುತ್ತಿದ್ದಾರೆ. ಮಂಗಳಯಾನ ಬಾಹ್ಯಾಕಾಶ ನೌಕೆಯನ್ನು ಮಂಗಳ ಗ್ರಹಕ್ಕೆ ಕಳುಹಿಸಿದ ಮೊದಲ ದೇಶ ಭಾರತ. ಇಂತದ್ದೊಂದು ಮಹತ್ವಾಕಾಂಕ್ಷೆ ಯೋಜನೆಯನ್ನು ಮನಮೋಹನ್ ಸಿಂಗ್ ಕಾಲದಲ್ಲಿ ರೂಪಿಸಲಾಗಿತ್ತು. ಆದರೆ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮೋದಿ ಪ್ರಯತ್ನಿಸಿದರು. ಅದೇ ರೀತಿ ಈಗ ಗಾಂಧೀಜಿಯವರಿಗೆ ಸೇರಬೇಕಾದ ಕ್ರೆಡಿಟನ್ನು ಇವರು ತೆಗೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌