ಕೈ ಶಾಸಕಿ ಬರ್ತೀನಿ ಅಂದ್ರು ಬೇಡ ಅಂತಿದ್ದಾರೆ ಬಿಜೆಪಿ ನಾಯಕರು

Published : Jul 09, 2019, 11:26 AM ISTUpdated : Jul 09, 2019, 11:42 AM IST
ಕೈ ಶಾಸಕಿ ಬರ್ತೀನಿ ಅಂದ್ರು ಬೇಡ ಅಂತಿದ್ದಾರೆ ಬಿಜೆಪಿ ನಾಯಕರು

ಸಾರಾಂಶ

ಕಾಂಗ್ರೆಸ್ ಶಾಸಕಿ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದು, ಇದಕ್ಕೆ ಬಿಜೆಪಿ ಪಾಳಯದಿಂದಲೇ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 

ಬೆಳಗಾವಿ [ಜು.09] : ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಇದ್ದು, ಇದೇ ವೇಳೆ ಖಾನಾಪುರ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ತಾಲೂಕು ಘಟಕ ನಿಷೇಧಿಸಿದೆ. 

ಅಂಜಲಿ ನಿಂಬಾಳ್ಕರ್ ಬಿಜೆಪಿ ಸೇರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಬೇರೆ ಪಕ್ಷದಿಂದ ಬಂದು ಬಿಜೆಪಿ ಶಾಸಕರಾಗುವುದಕ್ಕೆ  ತಾಲೂಕು ಘಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಖಾನಾಪುರ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ತಿರ್ಮಾನ ಕೈಗೊಳ್ಳಲಾಗಿದೆ. 

ಕರ್ನಾಟಕ ರಾಜಕೀಯ ಬೆಳವಣಿಗಗಳ ಕುರಿತ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

ಯಾವುದೇ ಕಾರಣಕ್ಕೂ ಅಂಜಲಿ ನಿಂಬಾಳ್ಕರ್ ಅವರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು, 20  ವರ್ಷದಿಂದ ದುಡಿದ ಬಿಜೆಪಿ ಕಾರ್ಯಕರ್ತರಿಗೆ ಈ ನಿಟ್ಟಿನಲ್ಲಿ ಅನ್ಯಾಯವಾಗುತ್ತದೆ ಎಂದು ಅಸಮಾಧಾನ ಹೊರಹಾಕುತ್ತಿದ್ದಾರೆ. 

ಬಿಜೆಪಿ ತಾಲೂಕ ಘಟಕದ ಅಧ್ಯಕ್ಷ ವಿಠಲ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ಸಂಜಯ ಕಂಚಿ ನೆತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌