
ಯಾದಗಿರಿ (ಮಾ.19): ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್'ರನ್ನು ಆಯ್ಕೆ ಮಾಡಿದ್ದು ಸರಿಯಲ್ಲ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಕಾರ್ಜುನ ಖರ್ಗೆ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಬಿಜೆಪಿ ಪಕ್ಷದ 325 ಶಾಸಕರಲ್ಲಿ ಉತ್ತಮ ಸಮರ್ಥ ನಾಯಕರಿದ್ದರು ಪಕ್ಷವು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡದೆ ವಿವಾದಿತ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡಿದ್ದು ದೇಶಕ್ಕೆ ಕೆಟ್ಟ ಸಂದೇಶ ನೀಡಿದಂತಾಗಿದೆ.
ಪ್ರಜಾಪ್ರಭುತ್ವದಲ್ಲಿ ಸಂವಿಧಾನಬದ್ದ ಮಾತನಾಡುವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕಿತ್ತು. ಆದರೆ ಸಮಾಜದಲ್ಲಿ ಶಾಂತಿ ಭಂಗ, ಜಗಳಗಂಟ ನಾಯಕನನ್ನು ಪಕ್ಷವು ಆಯ್ಕೆ ಮಾಡಿರುವುದು ಸರಿಯಲ್ಲ. ಇದು ದೇಶಕ್ಕೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಖರ್ಗೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.