ಜಿಲ್ಲಾ ಕಾರಾಗೃಹದಲ್ಲಿ 'ಅಭಿನಂದನ್' ನಾಮಕರಣ!

Published : Mar 16, 2019, 02:04 PM IST
ಜಿಲ್ಲಾ ಕಾರಾಗೃಹದಲ್ಲಿ 'ಅಭಿನಂದನ್' ನಾಮಕರಣ!

ಸಾರಾಂಶ

ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಾಮಕರಣ ಕಾರ್ಯಕ್ರಮ| ’ಅಭಿನಂದನ್’ ನಾಮಕರಣಕ್ಕೆ ಜೈಲಿನಲ್ಲಿ ರಂಗೋಲಿ, ಮನೆ ಮಾಡಿದ ಸಡಗರ| ಜಿಲ್ಲಾ ನ್ಯಾಯಾಧೀಶ ಸಂಜೀವ ಕುಲಕರ್ಣಿ ನೇತೃತ್ವದಲ್ಲಿ ನಾಮಕರಣ ಕಾರ್ಯಕ್ರಮ

ಕೊಪ್ಪಳ[ಮಾ.16]: ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಇಲ್ಲಿನ ಅಧಿಕಾರಿಗಳು ಇತರ ಖೈದಿಗಳೇ ಸೇರಿ ಮಹಿಳಾ ವಿಚಾರಣಾ ಬಂಧಿಯ ಮಗುವಿನ ನಾಮಕರಣ ಹಾಗೂ ಹುಟ್ಟುಹಬ್ಬದ  ಕಾರ್ಯಕ್ರಮ ನಡೆಸಿದ್ದಾರೆ.

ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣಾಧೀನ ಖೈದಿಯಾಗಿರುವ ಆಂಧ್ರ ಮೂಲದ ತಾಯಿ ಜ್ಯೋತಿಗೆ ವರ್ಷದ ಹಿಂದೆ ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಇಂದು ಮಾ. 16ರಂದು ಜಿಲ್ಲಾ ಕಾರಾಗೃಹದಲ್ಲೇ ಶಾಸ್ತ್ರೋಕ್ತವಾಗಿ, ಪೂಜಾ ವಿಧಿ- ವಿಧಾನ, ಮಂತ್ರ ಘೋಷಗಳೊಂದಿಗೆ ಮಗುವಿಗೆ ಅಭಿನಂದನ್ ಎಂದು ನಾಮಕರಣ ಮಾಡಲಾಗಿದೆ. 

ಜ್ಯೋತಿಯವರಿಗೆ ತನ್ನ ಮಗುವಿಗೆ ಅಭಿನಂದನ್ ಎಂದು ನಾಮಕರಣ ಮಾಡುವ ಆಸೆಯಿತ್ತು. ಹೀಗಾಗಿ ತಾಯಿಯ ಇಚ್ಛೆಯಂತೆ ಮಗುವಿಗೆ 'ಅಭಿನಂದನ್' ಎಂದು ಹೆಸರಿಡಲಾಗಿದೆ. ಜಿಲ್ಲಾ ನ್ಯಾಯಾಧೀಶ ಸಂಜೀವ ಕುಲಕರ್ಣಿ ನೇತೃತ್ವದಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಮಹಿಳಾ ಬಂಧಿಗಳು ಗ್ರಾಮೀಣ ಸೊಗಡಿನ ಜೋಗುಳ ಹಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!