
ಕೆ.ಆರ್.ಪೇಟೆ[ಆ.03]: ಕೆ.ಆರ್.ಪೇಟೆ ತಹಸಿಲ್ದಾರ್ ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಿದೆ.
ನಿನ್ನೆ ರಾತ್ರಿ ತಹಸೀಲ್ದಾರ್ ಮಹೇಶ್ ಚಂದ್ರ ವರನ್ನು ಅಪರಿಚಿತರು ಅಪಹರಿಸಿದ್ದರು. ಮಹೇಶ್ ಚಂದ್ರ ಅವರ ಕಿಡ್ನಾಪ್ ಪ್ರಕರಣ ತಾಲೂಕಿನಲ್ಲಿ ಆತಂಕ ಹುಟ್ಟಿಸಿತ್ತು. ಪೊಲೀಸರು ಕೂಡ ಹೆಚ್ಚು ತಲೆ ಕೆಡಿಸಿಕೊಂಡಿದ್ದರು. ಆದರೆ ಒಂದೇ ದಿನದಲ್ಲೇ ತಹಸೀಲ್ದಾರ್ ಬಿಡುಗಡೆಯಾಗಿದ್ದಾರೆ.
ಅಪಹರಣಕಾರರು ರಾತ್ರಿಯಲ್ಲಾ ಕಾರಿನಲ್ಲಿ ಸುತ್ತಾಡಿಸಿ ತಾಲೂಕಿನ ತೆಂಡೇಕೆರೆ ಬಳಿ ಇಂದು ಸಂಜೆ ಮಹೇಶ್ ಚಂದ್ರ ಅವರನ್ನು ಬಿಟ್ಟು ಹೋಗಿದ್ದಾರೆ. ಅಲ್ಲಿಂದ ಮಹೇಶ್ ಚಂದ್ರ ಅವರು ಲಾರಿ ಮೂಲಕ ಕೆ.ಆರ್.ಪೇಟೆ ತಲುಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.