ಹುದ್ದೆ ತ್ಯಜಿಸುವೆ ಎಂದ ಕಿರಣ್ ಬೇಡಿ

Published : Jan 07, 2017, 03:26 PM ISTUpdated : Apr 11, 2018, 12:38 PM IST
ಹುದ್ದೆ ತ್ಯಜಿಸುವೆ ಎಂದ ಕಿರಣ್ ಬೇಡಿ

ಸಾರಾಂಶ

2016ರ ಮೇ 29ರಂದು ಕಿರಣ್ ಬೇಡಿ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣ ಸ್ವೀಕರಿಸಿದ್ದರು.

ಪುದುಚೇರಿ(ಜ.07): ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ ಬೇಡಿ 2018ರ ಮೇನಲ್ಲಿ ತಮ್ಮ ಸ್ಥಾನ ತ್ಯಜಿಸುವುದಾಗಿ ಹೇಳಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳು ವ್ಯವಹರಿಸಬೇಕೆಂದು ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೀಡಿದ್ದ ಆದೇಶವನ್ನು ಬೇಡಿ ರದ್ದುಗೊಳಿಸಿದ್ದಕ್ಕೆ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಜತೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ಗೆ ದೂರು ಸಲ್ಲಿಸಿದ ಮಾರನೇ ದಿನವೇ ಲೆಫ್ಟಿನೆಂಟ್ ಗವರ್ನರ್‌ರಿಂದ ಸ್ಥಾನ ತ್ಯಜಿಸುವ ಹೇಳಿಕೆ ಹೊರಬಿದ್ದಿದೆ.

ಹಲವು ವಿಚಾರಗಳಲ್ಲಿ ಮುಖ್ಯಮಂತ್ರಿ ಮತ್ತು ಕಿರಣ್ ಬೇಡಿ ನಡುವೆ ಭಿನ್ನಾಭಿಪ್ರಾಯಗಳು ಇದ್ದವು.

2016ರ ಮೇ 29ರಂದು ಕಿರಣ್ ಬೇಡಿ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣ ಸ್ವೀಕರಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!