ಪ್ರಧಾನಿಯವರು ಇದೀಗ ಫ್ಯಾಶನ್ ಆಗಿದ್ದಾರೆ ಎಂದು ಅನುರಾಗ್ ಕಶ್ಯಪ್ ಗೆ ಟಾಂಗ್ ಕೊಟ್ಟ ರಿಜಿಜು

Published : Oct 17, 2016, 10:50 AM ISTUpdated : Apr 11, 2018, 01:00 PM IST
ಪ್ರಧಾನಿಯವರು ಇದೀಗ ಫ್ಯಾಶನ್ ಆಗಿದ್ದಾರೆ ಎಂದು ಅನುರಾಗ್ ಕಶ್ಯಪ್ ಗೆ ಟಾಂಗ್ ಕೊಟ್ಟ ರಿಜಿಜು

ಸಾರಾಂಶ

ಕಳೆದ ವರ್ಷ ಪಾಕ್ ಪ್ರವಾಸ ಕೈಗೊಂಡಿದ್ದಕ್ಕಾಗಿ ನಿರ್ಮಾಪಕ ಅನುರಾಗ್ ಕಶ್ಯಪ್ ಪ್ರಧಾನಿ ಮೋದಿಯವರ ಬಳಿ ಕ್ಷಮೆ ಕೋರಿದ ಬಳಿಕ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರನ್ ರಿಜಿಜು, ಸುದ್ಧಿಗಾಗಿ ಯಾರು ಬೇಕಾದರೂ ಪ್ರಧಾನಿಯವರನ್ನು ಪ್ರಶ್ನಿಸುವ ಧೋರಣೆ ಬೆಳೆದಿದೆ ಎಂದಿದ್ದಾರೆ.

ನವದೆಹಲಿ (ಅ.17): ಕಳೆದ ವರ್ಷ ಪಾಕ್ ಪ್ರವಾಸ ಕೈಗೊಂಡಿದ್ದಕ್ಕಾಗಿ ನಿರ್ಮಾಪಕ ಅನುರಾಗ್ ಕಶ್ಯಪ್ ಪ್ರಧಾನಿ ಮೋದಿಯವರ ಬಳಿ ಕ್ಷಮೆ ಕೋರಿದ ಬಳಿಕ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರನ್ ರಿಜಿಜು, ಸುದ್ಧಿಗಾಗಿ ಯಾರು ಬೇಕಾದರೂ ಪ್ರಧಾನಿಯವರನ್ನು ಪ್ರಶ್ನಿಸುವ ಧೋರಣೆ ಬೆಳೆದಿದೆ ಎಂದಿದ್ದಾರೆ.

ಭಾರತದಲ್ಲಿ ಇದೀಗ ಹೊಸ ಫ್ಯಾಶನ್ ಹುಟ್ಟಿಕೊಂಡಿದೆ. ಅವ ವಿದ್ಯಾರ್ಥಿಯೇ ಇರಬಹುದು ಅಥವಾ ಸಿನೆಮಾ ವ್ಯಕ್ತಿಯೇ ಇರಬಹುದು. ಪ್ರಧಾನಿ ವಿರುದ್ಧ ಮಾತನಾಡುವುದು ಅಥವಾ ಕೇವಲ ಸುದ್ಧಿಗಾಗಿ ಯಾವುದೇ ಲಾಜಿಕ್ ಇಲ್ಲದೇ ಪ್ರಧಾನಿಯವರನ್ನು ಪ್ರಶ್ನಿಸುವುದು ಚಟವಾಗಿಬಿಟ್ಟಿದೆ ಎಂದು ರಿಜಿಜು ಹೇಳಿದ್ದಾರೆ.

ಅನುರಾಗ್ ಕಶ್ಯಪ್ ಟ್ವಿಟರ್ ನಲ್ಲಿ ಕರಣ್ ಜೋಹರ್ ಗೆ ಬೆಂಬಲ ನೀಡುವುದಾಗಿ ಹೇಳಿಕೊಂಡಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹತ್ವದ ಉಪಗ್ರಹ ಲಾಂಚ್‌ಗೂ ಮೊದಲು ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳ ತಂಡ
ಸ್ವಚ್ಛ ಮಂಗಳೂರು ಮತ್ತೆ ಮಲೀನ: ರಸ್ತೆಗಳಲ್ಲಿ ರಾಶಿ ಬಿದ್ದ ಕಸ, ಇದಕ್ಕೆ ಹೊಣೆ ಯಾರು?