
ಬೆಂಗಳೂರು (ಅ.22): ರಾಜ್ಯ ಸರ್ಕಾರದ ವತಿಯಿಂದ ಇದೇ ಮೊದಲ ಬಾರಿಗೆ ರಾಣಿ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತಿ ಆಚರಣೆ ಮಾಡಲಾಗುತ್ತಿದೆ.
ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ, ಸಚಿವರಾದ ಎಂ ಬಿ ಪಾಟೀಲ್, ವಿನಯ ಕುಲಕರ್ಣಿ ಸೇರಿ ಶಾಸಕರು,ಸಮಾಜದ ಇತರೆ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಚನ್ನಮ್ಮ ಜಯಂತಿಯನ್ನು ಸರ್ಕಾರದ ಮೂಲಕವೇ ಆಚರಿಸಬೇಕು ಅನ್ನೋ ಒತ್ತಾಯ ಬಹಳ ವರ್ಷಗಳಿಂದ ಕೇಳ ಬರುತ್ತಲೇ ಇತ್ತು. ಇದೀಗ ಮೊದಲ ಬಾರಿ ಸರ್ಕಾರದ ವತಿಯಿಂದ ರಾಣಿ ಚೆನ್ನಮ್ಮಳ ಜಯಂತೋತ್ಸವ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.