
ಬೆಂಗಳೂರು(ಅ.27): DySP ಗಣಪತಿ ನಿಗೂಢ ಸಾವು ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ FIR ನಲ್ಲಿ ಜಾರ್ಜ್ ಹೆಸರು ಲ್ಲೇಖವಾಗಿರುವ ವಿಚಾರ ರಾಷ್ಟ್ರೀಯ ಮಾಧ್ಯಮಗಳಲ್ಲ ಸದ್ದು ಮಾಡಿದೆ. ಈ ಸುದ್ದಿಯ ಬೆನ್ನಲ್ಲೇ ಸಿಎಂ ಕರೆದಿರುವ ಸಭೆಯಿಂದ ಕೆ. ಜೆ ಜಾರ್ಜ್ ದೂರವುಳಿದಿರುವ ವಿಚಾರ ಬೆಳಕಿಗೆ ಬಂದಿದೆ.
ಸಿಎಂ ಸಭೆಯಿಂದ ದೂರವುಳಿದಿರುವ ಸಚಿವ ಕೆ. ಜೆ ಜಾರ್ಜ್ ಹಿರಿಯ ವಕೀಲರ ಜತೆ ಚರ್ಚೆ ನಡೆಸುತ್ತಿದ್ದ, ನಿರೀಕ್ಷಣಾ ಜಾಮೀನು ಪಡೆಯುವುದು ಸೇರಿದಂತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನೂನು ತಜ್ಞರೊಂದಿಗಿನ ಮಾತುಕತೆ ಮುಗಿದ ಬಳಿಕವಷ್ಟೇ ಸಿಎಂ ಕರೆದಿರುವ ಸಚಿವರ ಸಭೆಗೆ ಕೆ.ಜೆ. ಜಾರ್ಜ್ ಆಗಮಿಸಲಿದ್ದು, ದೂರವಾಣಿ ಮೂಲಕ ಸಿಎಂ ಜತೆ ಈ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.