
ಬೆಂಗಳೂರು(ಮೇ.30): ಪರಮೇಶ್ವರ್ ಮತ್ತೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆ ಇದೆ ಎಂಬ ಸುದ್ದಿಯ ಬೆನ್ನಲ್ಲೇ ಇದೀಗ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ಕೂಡಾ ಮತ್ತೆ ಗೃಹ ಖಾತೆ ಸಚಿವ ಸ್ಥಾನ ಒಲಿಯಲಿದೆ ಎಂಬ ಮಾತುಗಳು ದಟ್ಟವಾಗಿವೆ.
ಅಧಿವೇಶನದ ಬಳಿಕ ಗೃಹ ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡುವ ಸಾಧ್ಯತೆ ತಿಳಿದು ಬಂದಿದ್ದು, ಬಳಿಕ ಕೆ.ಜೆ.ಜಾರ್ಜ್ ಗೃಹ ಖಾತೆಯ ಹೊಣೆ ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಜೂನ್ 5ರಿಂದ 15ರವರೆಗೆ ನಡೆಯಲಿರುವ ಮಳೆಗಾಲದ ಅಧಿವೇಶನ ನಡೆಯಲಿದ್ದು, ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ಜಾರ್ಜ್ ಮತ್ತೆ ತಮ್ಮ ಹಳೆಯ ಖಾತೆಯ ಸ್ಥಾನ ಪಡೆಯಲಿದ್ದಾರೆ. ಇನ್ನು ಜಾರ್ಜ್ ಗೃಹ ಸಚಿವರಾದರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ರಾಮಲಿಂಗಾರೆಡ್ಡಿ ಹೆಗಲಿಗೆ ಬೀಳುತ್ತದೆ ಎಂಬ ಮಾತುಗಳೂ ಕೆಳಿ ಬಂದಿವೆ. ಇದರೊಂದಿಗೆ ಸಾರಿಗೆ ಇಲಾಖೆಯೂ ಇವರ ಹೊಣೆಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.