
ಮಧುಗಿರಿ(ಸೆ.21): ಕಾಂಗ್ರೆಸ್ ಪಾರ್ಟಿ ಕಳ್ಳರ ಪಾರ್ಟಿಯಿದ್ದಂಗೆ. ಯಾರು ಚನ್ನಾಗಿ ಕೆಲಸ ಮಾಡ್ತಾರೋ ಅವರ ಮೇಲೆ ನಾಯಕರು ಕಣ್ಣಿಟ್ಟಿರುತ್ತಾರೆ ಎಂದು ಕಾಂಗ್ರೆಸ್ ಶಾಸಕ ಸ್ವಂತ ಪಕ್ಷದ ವಿರುದ್ಧವೆ ಹರಿಹಾಯ್ದಿದ್ದಾರೆ.
ಮಧುಗಿರಿಯ ತಿಮ್ಲಾಪುರ ಗ್ರಾಮದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಸಮಾಧಾನ ತೋಡಿಕೊಂಡ ಅವರು, ಪ್ರಾಮಾಣಿಕವಾಗಿ ಕೆಲಸ ಮಾಡೋರ ವಿಚಾರದಲ್ಲಿ ಕಣ್ಣಿಟ್ಟಿರ್ತಾರೆ ಎಂದು ಕಾಂಗ್ರೆಸ್ ಪಾಳೆಯದಲ್ಲಿನ ತಮ್ಮ ಅಸಮಧಾನ ಹೊರಹಾಕಿದರು.
ರಾಜ್ಯದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ, ಜೆಡಿಎಸ್'ನಿಂದ ದೇವೇಗೌಡರು ಹಾಗೂ ಕಾಂಗ್ರೆಸ್'ನಿಂದ ಸಿದ್ದರಾಮಯ್ಯ ಅವರಿಗೆ ಮಾತ್ರ ಮತ ಸೆಳೆಯುವ ಶಕ್ತಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಅಧಿಕಾರದ ಅವಧಿಯಲ್ಲಿ ಅನೇಕ ಜನಪರ ಕೆಲಸ ಮಾಡಿದ್ದಾರೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.