
ಬೆಂಗಳೂರು(ಆ.14): ನಟ ಜಗ್ಗೇಶ್ ಹಿರಿಯ ಪುತ್ರ ಗುರುರಾಜ್'ಗೆ ಚಾಕು ಇರಿಯಲಾಗಿದೆ. ಬೆಂಗಳೂರಿನ ಆರ್.ಟಿ.ನಗರದಲ್ಲಿ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.
ಮಗನನ್ನು ಶಾಲೆಗೆ ಬಿಡಲು ಹೋದಂತಹ ಸಂದರ್ಭದಲ್ಲಿ ಆರ್.ಟಿ.ನಗರದಲ್ಲಿ ಟ್ರಾಫಿಕ್ ವಿಚಾರವಾಗಿ ನಡೆದ ಗಲಾಟೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಗುರುರಾಜ್ ಕಾಲಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಜಗ್ಗೇಶ್ ಪುತ್ರ ಗುರುರಾಜ್'ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಈ ವಿಚಾರವಾಗಿ ಪೊಲೀಸರಿಗೆ ಹೇಳಿಕೆ ನೀಡಿರುವ ಗುರುರಾಜ್ ಟ್ರಾಫಿಕ್ ವಿಚಾರದಲ್ಲಾದ ಘಟನೆ ವಿಕೋಪಕ್ಕೆ ತೆರಳಿ ದುಷ್ಕರ್ಮಿಗಳು ಚಾಕವಿನಿಂದ ಇರಿದಿದ್ದಾರೆ ಎಂದಿದ್ದಾರೆ. ಇವರ ಹೇಳಿಕೆಯನ್ನು ಪಡೆದಿರುವ ಆರ್. ಟಿ ನಗರ ಪೊಲೀಸರು ಹಲ್ಲ ಪ್ರಕರಣದಡಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.