
ಬೆಂಗಳೂರು[ಆ.18] ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು ರಾಜ್ಯದ ಮನವಿಗೆ ಸ್ಪಂದಿಸಿದ್ದಾರೆ. ರಕ್ಷಣಾ ಇಲಾಖೆಯಿಂದ ಮತ್ತಷ್ಟು ಅಧಿಕಾರಿಗಳ ನಿಯೋಜನೆಗೆ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರ ಜತೆ ದೂರವಾಣೆಯಲ್ಲಿ ಚರ್ಚೆ ನಡೆಸಿರುವ ಸಿಎಂ ಪ್ರವಾಹ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಮಸ್ಯೆಗಳನ್ನು ವಿವರಿಸಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಪತ್ರ ಸಹ ಬರೆದಿದ್ದಾರೆ.
ಸಂಕಷ್ಟದಲ್ಲಿ ಸಿಲುಕಿರುವವರಿಗೆ ಸಹಾಯವಾಣಿ
ಕೊಡಗಿನಲ್ಲಿ ವಾಯು ಸೇನಾ ಅಧಿಕಾರಿಗಳಿಂದ ಸಾವಿರಕ್ಕೂ ಹೆಚ್ಚು ಸಂತ್ರಸ್ತರ ರಕ್ಷಣೆ ಮಾಡಲಾಗಿದೆ. ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಗಳನ್ನು ಕಳುಹಿಸಲು ಸಿಎಂ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.