
ಬೆಂಗಳೂರು[ಆ.26] ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಗೆ ಪರಿಶೀಲನೆಗಾಗಿ ಆಗಮಿಸಿದ ಸಂದರ್ಭದ ಗೊಂದಲ ಮಾಧ್ಯಮಗಳಲ್ಲೂ ಸುದ್ದಿಯಾಗಿತ್ತು. ಇದಕ್ಕೆ ಒಂದು ರೀತಿಯಲ್ಲಿ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ವಿಪತ್ತು ನಿರ್ವಹಣಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರ ನೆರವಿನಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಮಾಡುತ್ತಿದ್ದದೇವೆ. ಪುನರ್ ವಸತಿ ನೀಡಲು ಸರಕಾರ ಬದ್ಧವಿದೆ ಎಂದು ಹೇಳಿದ್ದಾರೆ.
ಸಚಿವ ಮಹೇಶ್ ವಿರುದ್ಧ ರಕ್ಷಣಾ ಸಚಿವೆ ಮತ್ತೆ ಕೋಪ-ತಾಪ
ಪ್ರವಾಹ ಪ್ರವಾಸೋದ್ಯಮದ ಮೇಲೂ ಕೆಟ್ಟ ಪರಿಣಾಮ ಬೀರಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಅನಾಹುತ ಸಂಭವಿಸಿದ ಮೊದಲ ದಿನದಿಂದಲೇ ಕೊಡಗು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಉಸ್ತುವಾರಿ ವಹಿಸಿ ಶ್ರಮಿಸಿದ್ದಾರೆ. ಇನ್ನು ಮುಂದೆಯೂ ಕೇಂದ್ರ ಸರಕಾರ ನಮಗೆ ನೆರವು ನೀಡುತ್ತದೆ ಎಂಬ ಭರವಸೆ ಇದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.