ಕೋಡಿ ಮಠದ ಶ್ರೀ ಭವಿಷ್ಯ : ಸರ್ಕಾರಕ್ಕೆ ಟೈಮ್ ಫಿಕ್ಸ್

Published : Jul 01, 2019, 04:15 PM ISTUpdated : Jul 01, 2019, 04:58 PM IST
ಕೋಡಿ ಮಠದ ಶ್ರೀ ಭವಿಷ್ಯ : ಸರ್ಕಾರಕ್ಕೆ ಟೈಮ್ ಫಿಕ್ಸ್

ಸಾರಾಂಶ

ಕೋಡಿ ಮಠದ ಸ್ವಾಮೀಜಿ ಹೇಳಿದ ಭವಿಷ್ಯ ನಿಜವಾಗುತ್ತಿದೆಯಾ ಎನ್ನುವ ಪ್ರಶ್ನೆಯೊಂದು ಇದೀಗ ಎದ್ದಿದೆ. ಸರ್ಕಾರದ ಅವಧಿ ಬಗ್ಗೆಯೂ ಈಗ ಟೈಮ್ಸ್ ಫಿಕ್ಸ್ ಮಾಡಿ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. 

ದಾವಣಗೆರೆ [ಜು.1] : ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಅಲ್ಪಾಯುಷ್ಯವೆಂದು ಹೇಳುತ್ತಲೇ ಬಂದಿರುವ ಕೋಡಿಮಠದ ಸ್ವಾಮೀಜಿ ಇದೀ ಮತ್ತೊಮ್ಮೆ ಅದೇ ಭವಿಷ್ಯವನ್ನು ಪುನರುಚ್ಛರಿಸಿದ್ದಾರೆ.

ದಾವಣಗೆರೆಯಲ್ಲಿ ಹಾರನಹಳ್ಳಿ ಮತ್ತೊಮ್ಮೆ ಸರ್ಕಾರದ ಬಗ್ಗೆ ಹೇಳಿಕೆ ನೀಡಿದ್ದು, ಚುನಾವಣಾ ಪೂರ್ವದಲ್ಲಿ ಹೇಳಿದ್ದನ್ನು ಈಗಲೂ ಹೇಳುತ್ತೇನೆ. ಬಿತ್ತಿದ ಬೆಳಸು ಪರರು ಕೋಯ್ದಾರು. ಬಿತ್ತಿದ ಬೀಜ ಒಂದು ಫಸಲು ಇನ್ನೊಂದು. ಈ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲವೆಂದರು. 

ದೋಸ್ತಿಗೆ ಮರೆಯಾದ ಆನಂದ, ರಮೇಶ್ ಜಾರಕಿಹೊಳಿ ರಾಜೀನಾಮೆ

18 ತಿಂಗಳೊಳಗಾಗಿ ಮತವನ್ನು ಬೇಡುತ್ತಾರೆ ಎಂದು ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಿ, ಮಹತ್ತರ ಬದಲಾವಣೆಯಾಗುತ್ತದೆ ಎನ್ನುವುದನ್ನು ತಿಳಿಸಿದರು.

ಇನ್ನು ಮಳೆಯ ಬಗ್ಗೆಯೂ ಭವಿಷ್ಯ ನುಡಿದಿದ್ದು,  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತದೆ. ಯಾವುದೇ ತೊಂದರೆ ಇಲ್ಲ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿಕೆ ನೀಡಿದರು.

ಅವರು ದಾವಣಗೆರೆಯಲ್ಲಿ ಪತ್ರಿಕಾ ದಿನಾಚರಣೆಗೆ ಆಗಮಿಸಿದ್ದಾಗ ಮಾಧ್ಯಮದೊಂದಿಗೆ ಮಾತನಾಡಿದ ಕಾಂಗ್ರೆಸ್-ಜೆಡಿಎಸ್ ಸರಕಾರದ ಭವಿಷ್ಯದ ಬಗ್ಗೆ ಮಾತನಾಡಿದರು. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ