ಕೋಡಿ ಮಠದ ಶ್ರೀ ಹೇಳಿಯೂ ಹೇಳದ ಸರ್ಕಾರದ ಭವಿಷ್ಯ

Published : Apr 26, 2019, 01:01 PM ISTUpdated : Apr 26, 2019, 01:45 PM IST
ಕೋಡಿ ಮಠದ ಶ್ರೀ ಹೇಳಿಯೂ ಹೇಳದ ಸರ್ಕಾರದ ಭವಿಷ್ಯ

ಸಾರಾಂಶ

ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯ ಬದಲಾವಣೆಗಳಾಗುತ್ತಿವೆ. ಸದ್ಯ ಈ ಬಗ್ಗೆ ಕೋಡಿಮಠದ ಸ್ವಾಮೀಜಿ ಮಾತನಾಡಿದ್ದಾರೆ. 

ಬೆಳಗಾವಿ : ಲೋಕಸಭಾ ಚುನಾವಣಾ ನಂತರ ರಾಜ್ಯದಲ್ಲಿ ರಾಜಕೀಯದಲ್ಲಿ ಬದಲಾವಣೆ, ಧೃವಿಕರಣ ವಿಚಾರ ಭುಗಿಲೇಳುತ್ತಿವೆ. 

ಇತ್ತ ಮೈತ್ರಿ ಸರ್ಕಾರದ ಪತನ ಚರ್ಚೆಯಾಗುತ್ತಿದ್ದರೆ, ಅತ್ತ ಬಿಜೆಪಿ ಸರ್ಕಾರ ರಚನೆಯ ಬಗ್ಗೆ ಪ್ರಸ್ತಾಪ ಮಾಡುತ್ತಿದೆ. ಇದೇ ವೇಳೆ ಕೋಡಿ ಮಠದ ಸ್ವಾಮೀಜಿ ಯಾವುದೇ ಭವಿಷ್ಯ ಹೇಳುವುದಿಲ್ಲ ಎನ್ನುತ್ತಲೇ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,  ಸಮ್ಮಿಶ್ರ ಸರ್ಕಾರದ ಬಗ್ಗೆ ಈಗಾಗಲೇ ಹಲವು ಬಾರಿ ಮಾತನಾಡಿದ್ದೇನೆ. ಸದ್ಯ ರಾಜಕೀಯ ವಿಚಾರವಾಗಿ ಏನು ಮಾತನಾಡುವುದಿಲ್ಲ ಎಂದಿದ್ದಾರೆ.

ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಚುನಾವಣಾ ಆಯೋಗ ನನಗೆ ನೋಟಿಸ್ ಕೊಟ್ಟಿದೆ. ಮೇ 23ರವರೆಗೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವುದಿಲ್ಲ ಎಂದು ಬರೆದುಕೊಟ್ಟಿರುವೆ. ಆದ್ದರಿಂದ ಏನು ಹೇಳುವುದಿಲ್ಲ ಎಂದಿದ್ದಾರೆ.

ಆದರೆ ರಾಜಕೀಯದಲ್ಲಿ ನೀವು ಅಂದುಕೊಂಡಂತೆ ಬದಲಾವಣೆ ಆಗುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?