ಬಿಜೆಪಿ ಸಂಸದ ಮುನಿಸ್ವಾಮಿ ರಾಜಕೀಯ ಕುತೂಹಲ : ರಾಜೀನಾಮೆ ಕೊಡ್ತಾರಾ..?

Published : May 25, 2019, 09:11 AM IST
ಬಿಜೆಪಿ ಸಂಸದ ಮುನಿಸ್ವಾಮಿ ರಾಜಕೀಯ ಕುತೂಹಲ : ರಾಜೀನಾಮೆ ಕೊಡ್ತಾರಾ..?

ಸಾರಾಂಶ

ಕೋಲಾರ ನೂತನ ಸಂಸದರಾಗಿ ಆಯ್ಕೆಯಾಗಿರುವ ಮುನಿಸ್ವಾಮಿ ರಾಜಕೀಯ ಕುತೂಹಲ ಮೂಡಿಸಿದೆ. 

ಬೆಂಗಳೂರು :  ಕೋಲಾರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕಾಡುಗೋಡಿ ವಾರ್ಡ್‌ ಬಿಬಿಎಂಪಿ ಸದಸ್ಯ ಎಸ್‌.ಮುನಿಸ್ವಾಮಿ ಅವರು ಪಾಲಿಕೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ ಅಥವಾ ಎರಡೂ ಸ್ಥಾನದಲ್ಲಿ ಮುಂದುವರೆಯುತ್ತಾರಾ ಎಂಬುದು ಕುತೂಹಲ ಕೆರಳಿಸಿದೆ.

ಬಿಬಿಎಂಪಿ ಸದಸ್ಯರಾಗಿದ್ದವರು ಸಂಸದರಾಗಿ ಆಯ್ಕೆಯಾಗಿರುವುದು ಬಿಬಿಎಂಪಿ ಇತಿಹಾಸದಲ್ಲಿ ಇದೇ ಮೊದಲು. ಪಾಲಿಕೆ ಸದಸ್ಯರಾಗಿರುವಾಗಲೇ ಸಂಸದರಾಗಿ ಆಯ್ಕೆಯಾದರೆ ಅಂತಹವರು ಪಾಲಿಕೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಯಾವ ನಿಯಮವೂ ಇಲ್ಲದ ಕಾರಣ ಈ ವಿಚಾರದಲ್ಲಿ ಮುನಿಸ್ವಾಮಿ ಅವರ ನಿರ್ಧಾರವೇ ಅಂತಿಮವಾಗುತ್ತದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

ಬಿಬಿಎಂಪಿ ಸದಸ್ಯರಾಗಿರುವವರು ಶಾಸಕ, ಸಂಸದ ಅಥವಾ ಬೇರಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಅವರು ಯಾವುದಾದರೂ ಒಂದು ಸ್ಥಾನ ಉಳಿಸಿಕೊಂಡು ಮತ್ತೊಂದಕ್ಕೆ ರಾಜೀನಾಮೆ ನೀಡಬೇಕೆಂಬ ಯಾವುದೇ ಸ್ಪಷ್ಟನಿಯಮ ಕೆಎಂಸಿ ಕಾಯ್ದೆಯಲ್ಲಿ ಇಲ್ಲ. ಹಾಗಾಗಿಯೇ ಈವರೆಗೆ ಪಾಲಿಕೆ ಸದಸ್ಯರಾಗಿದ್ದುಕೊಂಡೇ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕೆ.ಚಂದ್ರಶೇಖರ್‌, ನೆ.ಲ.ನರೇಂದ್ರಬಾಬು, ಮುನಿರತ್ನ, ಭೈರತಿ ಬಸವರಾಜು ಅವರು ಶಾಸಕರಾಗಿ ಆಯ್ಕೆಯಾದರೂ ಬಿಬಿಎಂಪಿ ಸದಸ್ಯ ಸ್ಥಾನಗಳಿಗೆ ಯಾರೂ ರಾಜೀನಾಮೆ ನೀಡಿರಲಿಲ್ಲ. ಪ್ರಸ್ತುತ ಬಸವಪುರ ವಾರ್ಡ್‌ ಸದಸ್ಯೆಯಾದ ಪೂರ್ಣಿಮಾ ಅವರು ಕಳೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಹಿರಿಯೂರು ಶಾಸಕಿಯಾಗಿ ಆಯ್ಕೆಯಾದರೂ ಬಿಬಿಎಂಪಿ ಸದಸ್ಯೆಯಾಗಿಯೂ ಮುಂದುವರೆದಿದ್ದಾರೆ. ಆದರೆ, ಅವರಿಗೆ ಪಾಲಿಕೆಯಿಂದ ಯಾವುದೇ ಗೌರವಧನ, ಇತರೆ ಸೌಲಭ್ಯಗಳನ್ನು ನೀಡುತ್ತಿಲ್ಲ ಎನ್ನುತ್ತಾರೆ ಪಾಲಿಕೆ ಕೌನ್ಸಿಲ್‌ ಕಾರ್ಯದರ್ಶಿ ಪಲ್ಲವಿ ಅವರು.

ಶಾಸಕ, ಸಂಸದ ಸ್ಥಾನಗಳಿಗೆ ಆಯ್ಕೆಯಾದವರು ಪಾಲಿಕೆ ಸದಸ್ಯರಾಗಿಯೂ ಮುಂದುವರೆಯುವುದು ಸಮಂಜಸವಲ್ಲ. ಆದರೆ, ಅಂತಹವರು ಪಾಲಿಕೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ನಿಯಮವೇನೂ ಇಲ್ಲದ್ದರಿಂದ ಅವರ ನಿರ್ಧಾರ ಅಂತಿಮವಾಗುತ್ತದೆ. ಈ ಬಗ್ಗೆ ಇನ್ನಾದರೂ ಸರ್ಕಾರ ಒಂದು ಸ್ಪಷ್ಟನಿಯಮ ರೂಪಿಸಬೇಕು. ಒಂದು ಲಾಭದಾಯಕ ಹುದ್ದೆಗೆ ಆಯ್ಕೆಯಾದವರು ಮತ್ತೊಂದು ಹುದ್ದೆಯಲ್ಲಿ ಮುಂದುವರೆಯುವುದು ಸರಿಯಲ್ಲ ಎನ್ನುತ್ತಾರೆ ಪಾಲಿಕೆ ಹಿರಿಯ ಸದಸ್ಯರೊಬ್ಬರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!