ಹ್ಯಾರಿ ಹೌದಿನಿ ಆಗ್ತಿನಿ ಅಂತಾ ಹೂಗ್ಲಿ ನದಿಗೆ ಹಾರಿದವ ಮೇಲೆಳಲಿಲ್ಲ!

Published : Jun 17, 2019, 04:34 PM IST
ಹ್ಯಾರಿ ಹೌದಿನಿ ಆಗ್ತಿನಿ ಅಂತಾ ಹೂಗ್ಲಿ ನದಿಗೆ ಹಾರಿದವ ಮೇಲೆಳಲಿಲ್ಲ!

ಸಾರಾಂಶ

ಚಮತ್ಕಾರ ಮಾಡಲು ಹೋಗಿ ಜೀವ ಕಳೆದುಕೊಂಡ ಯುವ ಜಾದೂಗಾರ| ಭಾರತದ ಹ್ಯಾರಿ ಹೌದಿನಿ ಆಗ್ತಿನಿ ಅಂದವ ಜಲ ಸಮಾಧಿಯಾದ| ಕೋಲ್ಕತ್ತಾದ ಹಾವರಾ ಸೇತುವೆ ಬಳಿ ದುರ್ಘಟನೆ| ಪಂಜರದಿಂದ ಮೇಲೆ ಬರಲಾಗದೇ ಪ್ರಾಣ ತೆತ್ತ ಚಂಚಲ್ ಲಹರಿ| ಚಂಚಲ್ ಮೃತದೇಹಕ್ಕಾಗಿ ತೀವ್ರಗೊಂಡ ಶೋಧ ಕಾರ್ಯಾಚರಣೆ|

ಕೋಲ್ಕತ್ತಾ(ಜೂ.17): ಕೈ ಕಾಲುಗಳಿಗೆ ಸರಪಳಿ ಕಟ್ಟಿಕೊಂಡು ಬೋನಿನೊಳಗೆ ಬಂಧಿಯಾಗಿ, ನದಿಯಲ್ಲಿಳಿದು ಸುರಕ್ಷಿತವಾಗಿ ಮೇಲೆ ಬಂದು ಚಮತ್ಕಾರ ತೋರಿಸುತ್ತಿದ್ದ ಅಮೆರಿಕದ ಪ್ರಸಿದ್ಧ ಜಾದೂಗಾರ ಹ್ಯಾರಿ ಹೌದಿನಿ ಯಾರಿಗೆ ಗೊತ್ತಿಲ್ಲ ಹೇಳಿ?.

ಹ್ಯಾರಿ ಹೌದಿನಿಯ ಈ ಚಮತ್ಕಾರ ವಿಶ್ವ ಪ್ರಸಿದ್ಧ. ಆದರೆ ತಾನೂ ಆತನಂತೆಯೇ ಜಾದೂ ತೋರಿಸುತ್ತೇನೆ, ಭಾರತದ ಹ್ಯಾರಿ ಹೌದಿನಿಯಾಗುತ್ತೇನೆ ಎಂದು ಕೈಕಾಲು ಕಟ್ಟಿಕೊಂಡು ನದಿಗಿಳಿದ ಯುವಕನೋರ್ವ ನೀರುಪಾಲಾದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ಚಂಚಲ್ ಲಹರಿ ಎಂಬ ಯುವಕ ಚಮತ್ಕಾರ ತೋರಿಸಲು ಹೋಗಿ ಗಂಗಾ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾನೆ. ಕೈ ಕಾಲುಗಳನ್ನು ಸರಪಳಿಯಿಂದ ಬಿಗಿದು, ಬೋನಿನೊಳಗೆ ಹೋಗಿ ನದಿಯಲ್ಲಿ ಮುಳುಗಿದ ಚಂಚಲ್, ಹಾವರಾ ಸೇತುವೆಯ 28ನೇ ಪಿಲ್ಲರ್ ಬಳಿ ಮೇಲೆ ಬರಲಾಗದೇ ಮುಳಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೌರಾ ಸೇತುವೆ ಸಮೀಪದ ಮಿಲೇನಿಯಂ ಪಾರ್ಕ್​ ಬಳಿ ತಾನು ಬಂಧಿಯಾಗಿದ್ದ ಪಂಜರದಿಂದ ಹೊರ ಬರಲಾರದೇ ಚಂಚಲ್ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ಸದ್ಯ ಮುಳುಗು ತಜ್ಞರು ಜಲಸಮಾಧಿಯಾಗಿರುವ ಚಂಚಲ್ ಮೃತದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು